Latest

ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಹೆಬ್ಬಾರ್

ಮುಂಡಗೋಡ ಅಕ್ಟೋಬರ್ 02 : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತ ವ್ಯಾಪ್ತಿಯ ಹೊಸ ಓಣಿ ಗ್ರಾಮದಲ್ಲಿ ” ಜಲ ಜೀವನ ಮಿಷನ್ ” ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಲ್ ಸಿ ಪಾಟೀಲ್ ಮಾತನಾಡಿ ಮಾನ್ಯ ಸಚಿವರು ಸಾಲಗಾಂವ್ ಮತ್ತು ಚಿಗಳ್ಳಿ ಗ್ರಾಮ ಪಂಚಾಯತಿಗಳಿಗೆ ಸಾಕಷ್ಟು ಅನುದಾನವನ್ನು ನೀಡಿದ್ದಾರೆ ಮುಂದಿನ ದಿನಗಳಲ್ಲಿ ಎರಡು ಗ್ರಾಮ ಪಂಚಾಯತಿಗಳು ಮಾದರಿ ಗ್ರಾಮ ಪಂಚಾಯತಿಗಳು ಆಗಲಿವೆ ಎಂದ ಅವರು ಬೆಳೆ ಹಾನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿ ರೈತರಿಗೆ ಪರಿಹಾರವನ್ನು ಆದಷ್ಟು ಬೇಗ ಒದಗಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ಸಾಲಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿವೆ ಚಿಗಳ್ಳಿಯ ಶಿವಾಜಿ ಸರ್ಕಲ್ ನಿಂದ ಸಾಲಗಾಂವ್ ಗ್ರಾಮ ಪಂಚಾಯತಿಯವರೆಗೆ ಕಾಂಕ್ರೀಟ್ ರಸ್ತೆಯೂ ಸಹ ಮಂಜೂರಾಗಿದೆ ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ದೇವು ಪಾಟೀಲ್, ಪ್ರಮುಖರಾದ ಗುಡ್ಡಪ್ಪ ಕಾತೂರ, ವೈ.ಪಿ.ಪಾಟೀಲ್ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಕೊಣನಕೇರಿ, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ,ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

21 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago