ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿ ವಿಳಂಬದ ಬಗ್ಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿ, ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ತ್ವರಿತವಾಗಿ ಮೂಲಸೌಕರ್ಯ ಸೌಲಭ್ಯಗಳು ದೊರೆಯುವಂತೆ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.
ವಿಶ್ವ ಬ್ಯಾಂಕ್ ನೆರವಿನ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು. ಬೆಳಗಾವಿಯ ಕಾಮಗಾರಿ ಇದೇ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಯೋಜನೆಗಳನ್ನು 2027ರ ಜೂನ್ ಒಳಗೆ ಮುಗಿಸುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ್ದ ವೇಳೆ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ್ದಾಗಿ ತಿಳಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಲ್ಲಿನ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ KUIDFC ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.
ಸಭೆಯಲ್ಲಿ KUIDFC ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್ಗಳಾದ ಜೆ.ಆರ್. ನಂದೀಶ್, ಕೆ.ಪಿ. ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋವಾ ಮತ್ತು ಬೆಳಗಾವಿಯನ್ನು ಸಂಪರ್ಕಿಸಿದ ಐದು ವರ್ಷದ ಪ್ರೇಮಕಥೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕಾಲೇಜು ದಿನಗಳಲ್ಲಿ ಆರಂಭವಾದ ಪ್ರೀತಿ…
ದೆಹಲಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಾಗೂ ಅವರ…
ಅಮೆರಿಕದ ಓಹಿಯೋ ರಾಜ್ಯದಲ್ಲಿ ಮಹಿಳೆಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ ವಿಡಿಯೋ ಚಿತ್ರೀಕರಿಸಿದ ಪ್ರಕರಣದಲ್ಲಿ ಭಾರತೀಯ ಮೂಲದ ಅಮೆರಿಕನ್ ವೈದ್ಯನಿಗೆ…
ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಬಹುಚರ್ಚಿತ 'ಗುಲಾಲ್' ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ತಾವು ಏಕೆ ಕೈಬಿಟ್ಟೆ ಎಂಬುದನ್ನು ನಟಿ…
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿ ಕೆರೆಯಲ್ಲಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ 65 ವರ್ಷದ ಜಯಮ್ಮ ಅವರ ಕೊಲೆ ಪ್ರಕರಣವನ್ನು…
ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಇತ್ತೀಚಿನ ಪ್ರತಿಭಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕೆಲವು ವೀಡಿಯೊಗಳು ಭದ್ರತಾ…