Latest

ಅಪ್ರಾಪ್ತ ಬಾಲಕ ದೌರ್ಜನ್ಯ ಪ್ರಕರಣ: ಮಹಿಳೆಯ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ 52 ವರ್ಷದ ಮಹಿಳೆಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಪಡಿಸಬೇಕೆಂದು ಮಹಿಳೆ ಮನವಿ ಸಲ್ಲಿಸಿದ್ದರೂ, ನ್ಯಾಯಾಲಯವು ಆ ವಾದವನ್ನು ಅಂಗೀಕರಿಸಲಿಲ್ಲ.

ಮಹಿಳೆಯ ಪರವಾಗಿ ವಾದಿಸಿದ ವಕೀಲರು, “ಘಟನೆ ನಡೆದದ್ದು ನಾಲ್ಕು ವರ್ಷಗಳ ಹಿಂದೆ. ಮಹಿಳೆ ಬಾಲಕನ ಮೇಲೆ ಅತ್ಯಾಚಾರ ಎಸಗುವುದು ಸಾಧ್ಯವಿಲ್ಲ. ಜೊತೆಗೆ, ಪೋಕ್ಸೋ ಕಾಯಿದೆ ಮಹಿಳೆಯರಿಗೆ ಅನ್ವಯಿಸುವುದಿಲ್ಲ” ಎಂದು ಮನವಿ ಮಾಡಿದ್ದರು. ಆದರೆ, ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಈ ಎಲ್ಲ ವಾದಗಳನ್ನು ತಳ್ಳಿಹಾಕಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಪೋಕ್ಸೋ ಕಾಯಿದೆಯ ಉದ್ದೇಶ ಲಿಂಗಭೇದವಿಲ್ಲದೆ ಎಲ್ಲಾ ಮಕ್ಕಳ ಬಾಲ್ಯ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದಾಗಿದೆ ಎಂದು ಸ್ಪಷ್ಟಪಡಿಸಿದೆ. ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಸೆಕ್ಷನ್ 3, 4, 5 ಹಾಗೂ 6 ಅಡಿಯಲ್ಲಿ ಪ್ರಕರಣ ಶಿಕ್ಷಾರ್ಹವಾಗಿದ್ದು, “ನಾಲ್ಕು ವರ್ಷಗಳ ನಂತರ ದೂರು ದಾಖಲಿಸಲಾಗಿದೆ ಎಂಬುದು ಪ್ರಕರಣವನ್ನು ರದ್ದುಪಡಿಸಲು ಕಾರಣವಾಗಲಾರದು” ಎಂದು ಅಭಿಪ್ರಾಯಪಟ್ಟಿದೆ.

ಮಹಿಳೆಯ ಪರ ವಕೀಲರು, “ಆರೋಪಿ ಮತ್ತು ದೂರುದಾರರ ಕುಟುಂಬಗಳ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಪಡೆದ ಹಣ ಹಿಂತಿರುಗಿಸಲಾಗದ ಕಾರಣದಿಂದ ದೂರು ನೀಡಲಾಗಿದೆ” ಎಂದು ವಾದಿಸಿದರೂ, ನ್ಯಾಯಾಲಯ ಅದನ್ನೂ ತಿರಸ್ಕರಿಸಿದೆ. ಅಲ್ಲದೇ, “ಬಾಲಕ ಮಾನಸಿಕ ಆಘಾತದಿಂದ ನಾಲ್ಕು ವರ್ಷಗಳ ನಂತರವೇ ದೂರು ನೀಡಿದ” ಎಂಬ ವಿಷಯಕ್ಕೆ ಸಹ ಸಾಕ್ಷ್ಯಾಧಾರವಿಲ್ಲ ಎಂದು ತಿಳಿಸಿದೆ.

ಹೀಗಾಗಿ, ಮಹಿಳೆ ವಿರುದ್ಧದ ಪ್ರಕರಣದಲ್ಲಿ ಶಿಕ್ಷಾರ್ಹ ಅಂಶಗಳು ಸ್ಪಷ್ಟವಾಗಿವೆ ಎಂದು ಹೇಳಿ, ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago