Latest

ಅಪ್ರಾಪ್ತ ಬಾಲಕ ದೌರ್ಜನ್ಯ ಪ್ರಕರಣ: ಮಹಿಳೆಯ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ 52 ವರ್ಷದ ಮಹಿಳೆಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಪಡಿಸಬೇಕೆಂದು ಮಹಿಳೆ ಮನವಿ ಸಲ್ಲಿಸಿದ್ದರೂ, ನ್ಯಾಯಾಲಯವು ಆ ವಾದವನ್ನು ಅಂಗೀಕರಿಸಲಿಲ್ಲ.

ಮಹಿಳೆಯ ಪರವಾಗಿ ವಾದಿಸಿದ ವಕೀಲರು, “ಘಟನೆ ನಡೆದದ್ದು ನಾಲ್ಕು ವರ್ಷಗಳ ಹಿಂದೆ. ಮಹಿಳೆ ಬಾಲಕನ ಮೇಲೆ ಅತ್ಯಾಚಾರ ಎಸಗುವುದು ಸಾಧ್ಯವಿಲ್ಲ. ಜೊತೆಗೆ, ಪೋಕ್ಸೋ ಕಾಯಿದೆ ಮಹಿಳೆಯರಿಗೆ ಅನ್ವಯಿಸುವುದಿಲ್ಲ” ಎಂದು ಮನವಿ ಮಾಡಿದ್ದರು. ಆದರೆ, ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಈ ಎಲ್ಲ ವಾದಗಳನ್ನು ತಳ್ಳಿಹಾಕಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಪೋಕ್ಸೋ ಕಾಯಿದೆಯ ಉದ್ದೇಶ ಲಿಂಗಭೇದವಿಲ್ಲದೆ ಎಲ್ಲಾ ಮಕ್ಕಳ ಬಾಲ್ಯ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದಾಗಿದೆ ಎಂದು ಸ್ಪಷ್ಟಪಡಿಸಿದೆ. ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಸೆಕ್ಷನ್ 3, 4, 5 ಹಾಗೂ 6 ಅಡಿಯಲ್ಲಿ ಪ್ರಕರಣ ಶಿಕ್ಷಾರ್ಹವಾಗಿದ್ದು, “ನಾಲ್ಕು ವರ್ಷಗಳ ನಂತರ ದೂರು ದಾಖಲಿಸಲಾಗಿದೆ ಎಂಬುದು ಪ್ರಕರಣವನ್ನು ರದ್ದುಪಡಿಸಲು ಕಾರಣವಾಗಲಾರದು” ಎಂದು ಅಭಿಪ್ರಾಯಪಟ್ಟಿದೆ.

ಮಹಿಳೆಯ ಪರ ವಕೀಲರು, “ಆರೋಪಿ ಮತ್ತು ದೂರುದಾರರ ಕುಟುಂಬಗಳ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಪಡೆದ ಹಣ ಹಿಂತಿರುಗಿಸಲಾಗದ ಕಾರಣದಿಂದ ದೂರು ನೀಡಲಾಗಿದೆ” ಎಂದು ವಾದಿಸಿದರೂ, ನ್ಯಾಯಾಲಯ ಅದನ್ನೂ ತಿರಸ್ಕರಿಸಿದೆ. ಅಲ್ಲದೇ, “ಬಾಲಕ ಮಾನಸಿಕ ಆಘಾತದಿಂದ ನಾಲ್ಕು ವರ್ಷಗಳ ನಂತರವೇ ದೂರು ನೀಡಿದ” ಎಂಬ ವಿಷಯಕ್ಕೆ ಸಹ ಸಾಕ್ಷ್ಯಾಧಾರವಿಲ್ಲ ಎಂದು ತಿಳಿಸಿದೆ.

ಹೀಗಾಗಿ, ಮಹಿಳೆ ವಿರುದ್ಧದ ಪ್ರಕರಣದಲ್ಲಿ ಶಿಕ್ಷಾರ್ಹ ಅಂಶಗಳು ಸ್ಪಷ್ಟವಾಗಿವೆ ಎಂದು ಹೇಳಿ, ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago