Latest

ಅಪ್ರಾಪ್ತ ಬಾಲಕ ದೌರ್ಜನ್ಯ ಪ್ರಕರಣ: ಮಹಿಳೆಯ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ 52 ವರ್ಷದ ಮಹಿಳೆಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಪಡಿಸಬೇಕೆಂದು ಮಹಿಳೆ ಮನವಿ ಸಲ್ಲಿಸಿದ್ದರೂ, ನ್ಯಾಯಾಲಯವು ಆ ವಾದವನ್ನು ಅಂಗೀಕರಿಸಲಿಲ್ಲ.

ಮಹಿಳೆಯ ಪರವಾಗಿ ವಾದಿಸಿದ ವಕೀಲರು, “ಘಟನೆ ನಡೆದದ್ದು ನಾಲ್ಕು ವರ್ಷಗಳ ಹಿಂದೆ. ಮಹಿಳೆ ಬಾಲಕನ ಮೇಲೆ ಅತ್ಯಾಚಾರ ಎಸಗುವುದು ಸಾಧ್ಯವಿಲ್ಲ. ಜೊತೆಗೆ, ಪೋಕ್ಸೋ ಕಾಯಿದೆ ಮಹಿಳೆಯರಿಗೆ ಅನ್ವಯಿಸುವುದಿಲ್ಲ” ಎಂದು ಮನವಿ ಮಾಡಿದ್ದರು. ಆದರೆ, ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಈ ಎಲ್ಲ ವಾದಗಳನ್ನು ತಳ್ಳಿಹಾಕಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಪೋಕ್ಸೋ ಕಾಯಿದೆಯ ಉದ್ದೇಶ ಲಿಂಗಭೇದವಿಲ್ಲದೆ ಎಲ್ಲಾ ಮಕ್ಕಳ ಬಾಲ್ಯ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದಾಗಿದೆ ಎಂದು ಸ್ಪಷ್ಟಪಡಿಸಿದೆ. ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ಸೆಕ್ಷನ್ 3, 4, 5 ಹಾಗೂ 6 ಅಡಿಯಲ್ಲಿ ಪ್ರಕರಣ ಶಿಕ್ಷಾರ್ಹವಾಗಿದ್ದು, “ನಾಲ್ಕು ವರ್ಷಗಳ ನಂತರ ದೂರು ದಾಖಲಿಸಲಾಗಿದೆ ಎಂಬುದು ಪ್ರಕರಣವನ್ನು ರದ್ದುಪಡಿಸಲು ಕಾರಣವಾಗಲಾರದು” ಎಂದು ಅಭಿಪ್ರಾಯಪಟ್ಟಿದೆ.

ಮಹಿಳೆಯ ಪರ ವಕೀಲರು, “ಆರೋಪಿ ಮತ್ತು ದೂರುದಾರರ ಕುಟುಂಬಗಳ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು. ಪಡೆದ ಹಣ ಹಿಂತಿರುಗಿಸಲಾಗದ ಕಾರಣದಿಂದ ದೂರು ನೀಡಲಾಗಿದೆ” ಎಂದು ವಾದಿಸಿದರೂ, ನ್ಯಾಯಾಲಯ ಅದನ್ನೂ ತಿರಸ್ಕರಿಸಿದೆ. ಅಲ್ಲದೇ, “ಬಾಲಕ ಮಾನಸಿಕ ಆಘಾತದಿಂದ ನಾಲ್ಕು ವರ್ಷಗಳ ನಂತರವೇ ದೂರು ನೀಡಿದ” ಎಂಬ ವಿಷಯಕ್ಕೆ ಸಹ ಸಾಕ್ಷ್ಯಾಧಾರವಿಲ್ಲ ಎಂದು ತಿಳಿಸಿದೆ.

ಹೀಗಾಗಿ, ಮಹಿಳೆ ವಿರುದ್ಧದ ಪ್ರಕರಣದಲ್ಲಿ ಶಿಕ್ಷಾರ್ಹ ಅಂಶಗಳು ಸ್ಪಷ್ಟವಾಗಿವೆ ಎಂದು ಹೇಳಿ, ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

15 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago