Categories: Latest

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕರು ಇದನ್ನು ಇತ್ತೀಚಿನ ಘಟನೆ ಎಂದು ಭಾವಿಸಿ ಹಂಚಿಕೊಳ್ಳುತ್ತಿದ್ದು, ಈ ಬಗ್ಗೆ ಚಾದರ್‌ಘಾಟ್ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ವೈರಲ್ ಆಗಿರುವುದು ಹೊಸ ವಿಡಿಯೊ ಅಲ್ಲ. ಇದೇ ದೃಶ್ಯಗಳು 2025ರ ನವೆಂಬರ್‌ 7ರಂದು ಮೊದಲ ಬಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಆಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದು, ಆಟೋ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿದ್ದರು. ಮಹಿಳೆಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಅಸಭ್ಯ ಹಾಗೂ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.

ಬಳಿಕ ಬಾಲಕನನ್ನು ನಾಂಪಲ್ಲಿಯ ರೆಡ್ ಹಿಲ್ಸ್‌ನಲ್ಲಿರುವ ಜುವೈನೈಲ್ ಜಸ್ಟಿಸ್ ಬೋರ್ಡ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೋರ್ಡ್, ಒಂದು ತಿಂಗಳ ಕಾಲ ಪ್ರತಿದಿನ ನಾಲ್ಕು ಗಂಟೆಗಳಷ್ಟು ಸಮುದಾಯ ಸೇವೆ (Community Service) ಮಾಡುವಂತೆ ಆದೇಶಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಂದು ವಿಚಾರಣೆ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಇನ್ನೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಈಗಾಗಲೇ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಡಿಯೊಗಳನ್ನು ಹೊಸ ಘಟನೆಗಳಂತೆ ಹಂಚಿ ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಯಾವುದೇ ಸುದ್ದಿ ಅಥವಾ ವಿಡಿಯೊವನ್ನು ಹಂಚಿಕೊಳ್ಳುವ ಮುನ್ನ ಅದರ ಸತ್ಯಾಸತ್ಯತೆ ಪರಿಶೀಲಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

1 hour ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

1 hour ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

2 hours ago

ಮಳೆಗಾಲದ ಸೊಬಗಿನಲ್ಲಿ ಮಿಂದೇಳಿದ ಕಪ್ಪತ್ತಗುಡ್ಡ: ಪರಿಸರ ಪ್ರಿಯರನ್ನು ಕೈಬೀಸಿ ಕರೆಯುತ್ತಿರುವ ಉತ್ತರ ಕರ್ನಾಟಕದ ಸಹ್ಯಾದ್ರಿ

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಕಪ್ಪತ್ತಗುಡ್ಡ ಮಳೆಗಾಲದ ಆಗಮನದೊಂದಿಗೆ ಹಸಿರು ಹೊದಿಕೆ ತೊಟ್ಟು ಪ್ರಕೃತಿ ಪ್ರೇಮಿಗಳು,…

5 hours ago

ಹುಬ್ಬಳ್ಳಿಯಲ್ಲಿ ರೈಲ್ವೆ ಹಳಿ ಪಕ್ಕ ಯುವಕನ ಶವ ಪತ್ತೆ; ಪತ್ನಿಯೊಂದಿಗೆ ಕಲಹದ ಬಳಿಕ ವ್ಯಸನಕ್ಕೆ ಬಿದ್ದಿದ್ದ ಆರೋಪ

ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲ ರೈಲ್ವೆ ಸೇತುವೆ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ 25 ವರ್ಷದ ಯುವಕನ ಶವ ಪತ್ತೆಯಾಗಿದ್ದು,…

23 hours ago

ಗುಡಿಗೇರಿಯಲ್ಲಿ ಅಕ್ರಮ ಮಟ್ಕಾ ದಂಧೆ ಮೇಲೆ ಪೊಲೀಸರ ದಾಳಿ; ಓಸಿ ಬರೆಯುತ್ತಿದ್ದ ಆರೋಪಿ ಬಂಧನ

ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಕೆಳಗಿನ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಮಟ್ಕಾ (ಓಸಿ) ಸಂಖ್ಯೆಗಳನ್ನು ಬರೆಯುತ್ತಿದ್ದ…

23 hours ago