Crime

ಅಪ್ರಾಪ್ತಳ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ: ಎಸ್.ಎಸ್.ಎಲ್.ಸಿ.ವಿಧ್ಯಾರ್ಥಿನಿ ಗರ್ಭಿಣಿ! ಕಾಮುಕ ಚಿಕ್ಕಪ್ಪ ಅಂದರ್.

ನಂಜನಗೂಡು; ಶಾಲೆಯಿಂದ ವಿಧ್ಯಾರ್ಥಿನಿಯನ್ನ ಮನೆಗೆ ಕರೆತಂದ ಸ್ವಂತ ಚಿಕ್ಕಪ್ಪನೇ ಅತ್ಯಾಚಾರವೆಸಗಿ ಅಪ್ರಾಪ್ತ ಬಾಲಕಿ ಗರ್ಭವತಿಯಾಗುವಂತೆ ಮಾಡಿರುವ ಅಮಾನವೀಯ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ನಂಜನಗೂಡು ಪಟ್ಟಣದಲ್ಲಿ ಘಟನೆ ನಡೆದಿದ್ದು 10 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆತನ ಚಿಕ್ಕಪ್ಪನೆೇ ಅತ್ಯಾಚಾರವೆಸಗಿ ಸಿಕ್ಕಿಬಿದ್ದಿದ್ದಾನೆ .ಕಾಮುಕ ಚಿಕ್ಕಪ್ಪನನ್ನ ಪೊಲೀಸರು ಬಂದಿಸಿ ಕಂಬಿ ಎಣಿಸಲು ಕಳಿಸಿದ್ದಾರೆ.

ಕಳೆದ ಮೂರು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಮನೆಯವರು ಬಾಲಕಿಯನ್ನ ವೈದ್ಯರ ಬಳಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.ಬಾಲಕಿಯ ಚಿಕ್ಕಪ್ಪ ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ. 10 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನ ಜನವರಿಯಲ್ಲಿ ಪುಸಲಾಯಿಸಿ ಮನೆಗೆ ಕರೆತಂದಿದ್ದಾನೆ.ನಂತರ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ಬೆದರಿಸಿ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ದಿನ ಕಳೆದಂತೆ ಪೀರಿಯೆಡ್ಸ್ ನಲ್ಲಿ ವೆತ್ಯಾಸ ಕಂಡು ಬಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 3 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನ ತಮ್ಮ ವಶಕ್ಕೆ ಪಡೆದಿದ್ದಾರೆ.
ನಂಜುಂಡಸ್ವಾಮಿ ವಿರುದ್ದ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಎಸ್.ಎಸ್.ಎಲ್.ಸಿ.ಪರೀಕ್ಷೆಗಳು ನಡೆಯುತ್ತಿರುವುದರಿಂದ ನೊಂದ ಬಾಲಕಿಯನ್ನ ಮೈಸೂರಿನ ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ. ವರದಿ: ಮೋಹನ್

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

6 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

6 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

6 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

6 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

6 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago