Categories: CrimeLatest

ತಪ್ಪು ಅರ್ಥದ ದ್ವೇಷವೇ ಕಾರಣ: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣಕ್ಕೆ ತಿರುವು

ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬಹಿರಂಗಪಡಿಸಿದ್ದಾರೆ. ತನಿಖೆಯಲ್ಲಿ ಈ ಹತ್ಯೆಗೆ ವೈಯಕ್ತಿಕ ದ್ವೇಷ ಹಾಗೂ ತಪ್ಪು ಅರ್ಥೈಸಿಕೆ ಪ್ರಮುಖ ಕಾರಣವೆಂದು ತಿಳಿದುಬಂದಿದೆ.

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಮುಖ್ಯ ಆರೋಪಿ ಮೊಹ್ಮದ್ ಷಾ ಮತ್ತು ಫೈರೋಜ್ ಪಠಾಣ್ ನಡುವೆ ದೀರ್ಘಕಾಲದಿಂದ ವೈಯಕ್ತಿಕ ವೈಷಮ್ಯ ಇತ್ತು. ಫೈರೋಜ್ ಪದೇ ಪದೇ ಕಿರಿಕಿರಿ ನೀಡುತ್ತಿದ್ದ ಎಂದು ವಿಚಾರಣೆ ವೇಳೆ ಮೊಹ್ಮದ್ ಷಾ ಹೇಳಿಕೊಂಡಿದ್ದಾನೆ. ಇವರಿಬ್ಬರ ನಡುವಿನ ವಿವಾದ ಹಲವು ಬಾರಿ ಪೊಲೀಸ್ ಠಾಣೆಯವರೆಗೂ ತಲುಪಿತ್ತು. ಈ ದ್ವೇಷವನ್ನು ಮನಸ್ಸಿನಲ್ಲಿ ಇಟ್ಟುಕೊಂಡ ಆರೋಪಿ, ಇತರರನ್ನು ಸೇರಿಸಿಕೊಂಡು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ಮಧ್ಯೆ, ಫೈರೋಜ್ ಪಠಾಣ್ ಅವರಿಗೆ ಶೀಘ್ರದಲ್ಲೇ ಮದುವೆ ನಿಶ್ಚಯವಾಗಿತ್ತು. ಮದುವೆ ಸಿದ್ಧತೆಯ ನಿಮಿತ್ತ ಅವರು ಸ್ನೇಹಿತರೊಂದಿಗೆ ಓಡಾಡುತ್ತಿದ್ದರು. ಆದರೆ, ಇದನ್ನು ತಪ್ಪಾಗಿ ಅರ್ಥೈಸಿಕೊಂಡ ಆರೋಪಿಗಳು, ಫೈರೋಜ್ ತನ್ನ ಮೇಲೆ ದಾಳಿ ಮಾಡಲು ಗುಂಪು ಸೇರಿಸುತ್ತಿದ್ದಾನೆ ಎಂದು ಭಾವಿಸಿದ್ದರು. ಹೀಗಾಗಿ ಹಲವು ದಿನಗಳಿಂದ ಅವರ ಚಲನವಲನವನ್ನು ಗಮನಿಸುತ್ತಿದ್ದ ಆರೋಪಿಗಳು, ಮನೆಯಲ್ಲಿ ಪುರುಷರು ಇಲ್ಲದ ಸಮಯದಲ್ಲಿ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತರಾದವರು ಮೊಹ್ಮದ್ ಷಾ, ಸೈಯದ್ ಗೌಸ್ ಜಾನಿಷಾ, ಫರವೇಜ್ ಆಲಂ ಮಹಲ್ದಾರ, ಸಮೀರ್ ಅಹ್ಮದ್ ಮಕಾಂದಾರ್, ಸದ್ದಾಂ ಹುಸೇನ್ ನವಲಗುಂದ, ಖೈಫ್ ರೆಹಮಾನ್ ಬೈ, ಅರಬಾಜ್ ಹಂಚಿನಾಳ, ಸೋಹಿಲ್ ಖಾನ್ ಹಾಲಭಾವಿ ಹಾಗೂ ಮಕ್ತುಂ ಸೊಗಲದ ಎಂದು ಪೊಲೀಸರು ತಿಳಿಸಿದ್ದಾರೆ. ಇವರಲ್ಲಿ ಕೆಲವರು ಅಪರಾಧ ಹಿನ್ನೆಲೆ ಹೊಂದಿದ್ದಾರೆ.

ಕೃತ್ಯಕ್ಕೆ ಬಳಸಿದ ಎರಡು ಬೈಕ್‌ಗಳು ಮತ್ತು ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇನ್ನಷ್ಟು ಮಾಹಿತಿಗಾಗಿ ತನಿಖೆ ಮುಂದುವರಿಸಿದ್ದಾರೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago