Categories: CrimeLatest

15 ನಿಮಿಷದಲ್ಲಿ ಕಾಣೆಯಾದವಳು,1500 ಅಡಿ ಆಳದಲ್ಲಿ ಪತ್ತೆ: ಶ್ರೀನಂದಾ ಸಾವು ಹೇಗಾಯ್ತು?

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದ ಘಟನೆ ದುಃಖಾಂತ್ಯ ಕಂಡಿದೆ. ಐದು ದಿನಗಳ ಬಳಿಕ ಆಕೆಯ ಶವ ಬಾಬಾ ಬುಡನ್‌ಗಿರಿ ಬಳಿ 1500 ಅಡಿ ಆಳದ ಕಣಿವೆಯಲ್ಲಿ ಪತ್ತೆಯಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಪ್ರಪಾತಕ್ಕೆ ಬಿದ್ದು ಸಾವಿಗೀಡಾಗಿರುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. ಆದರೆ, ಬಾಲಕಿಯ ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು, ಸಂಪೂರ್ಣ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಇದರ ನಡುವೆ, ಪ್ರಾಥಮಿಕ ಮರಣೋತ್ತರ ವರದಿ ಹೊರಬಿದ್ದಿದ್ದು, ಯಾವುದೇ ಅಸಹಜತೆ ಕಂಡುಬಂದಿಲ್ಲ ಎಂದು ತಿಳಿಸಿದೆ. ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಬಿದ್ದ ಗಂಭೀರ ಗಾಯವೇ ಸಾವಿಗೆ ಕಾರಣವಾಗಿದೆ. ದೇಹದ ಹಲವು ಭಾಗಗಳಲ್ಲಿ ಗಾಯಗಳು ಹಾಗೂ ಮೂಳೆ ಮುರಿತಗಳು ಕಂಡುಬಂದಿದ್ದು, ಮೇಲಿನಿಂದ ಬಿದ್ದ ಪರಿಣಾಮವೇ ಇದಕ್ಕೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಶ್ರೀನಂದಾಳ ಮೃತದೇಹವನ್ನು ಕುಟುಂಬಸ್ಥರು ಸ್ವಗ್ರಾಮಕ್ಕೆ ಕೊಂಡೊಯ್ದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ತನಿಖೆಯಲ್ಲಿ ಯಾವುದೇ ಅನುಮಾನಾಸ್ಪದ ಅಂಶಗಳು ಪತ್ತೆಯಾಗಿಲ್ಲದ ಕಾರಣ, ಇದು ಕೊಲೆ ಪ್ರಕರಣವಲ್ಲ ಎಂಬುದಾಗಿ ಪ್ರಾಥಮಿಕವಾಗಿ ನಿರ್ಧರಿಸಲಾಗಿದೆ. ಹುಡುಕಾಟದ ವೇಳೆ ಮಧ್ಯಾಹ್ನ ಸುಮಾರು 12 ಗಂಟೆಗೆ ಶವ ಪತ್ತೆಯಾಗಿದ್ದು, ಬಟ್ಟೆಗಳು ಹರಿದು ಹೋಗಿರುವುದು ಮತ್ತು ಮರದ ಕೊಂಬೆಗಳಿಗೆ ತಗುಲಿ ಗಾಯಗೊಂಡಿರುವುದು ಗಮನಕ್ಕೆ ಬಂದಿದೆ.

ಶ್ರೀನಂದಾಳ ಶವ ಪತ್ತೆಗೆ ಪೊಲೀಸರು, ಅರಣ್ಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಘಟನೆ ನಡೆದ ಸ್ಥಳದಲ್ಲೇ ಪೊಲೀಸರು ಪರಿಶೀಲನೆ ನಡೆಸಿದ್ದು, ಬಾಲಕಿಯ ತಂದೆಯ ಸಮ್ಮುಖದಲ್ಲಿಯೂ ತನಿಖೆ ಮುಂದುವರಿಸಲಾಯಿತು.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ದಯಾಮ್, “ಕುಟುಂಬದ ಅನುಮಾನಗಳನ್ನೂ ಗಮನದಲ್ಲಿಟ್ಟುಕೊಂಡು ಎಲ್ಲ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗುತ್ತಿದೆ. ಯಾವುದೇ ಸಾಧ್ಯತೆಯನ್ನು ತಳ್ಳಿಹಾಕುವುದಿಲ್ಲ” ಎಂದು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ:
ಶ್ರೀನಂದಾ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕದಂಬಜಿಪುರಂ ನಿವಾಸಿಗಳಾದ ರಮೇಶ್ ಗೋಪಾಲನ್ ಮತ್ತು ರೋಹಿಣಿ ದಂಪತಿಯ ಪುತ್ರಿ. ಸುಮಾರು 40 ಜನರ ಪ್ರವಾಸಿ ತಂಡದೊಂದಿಗೆ ಕಳೆದ ಶನಿವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಏಪ್ರಿಲ್ 7ರಂದು ಸಂಜೆ 5:20ರ ಸುಮಾರಿಗೆ ಕುಟುಂಬದೊಂದಿಗೆ ಫೋಟೋ ತೆಗೆಸಿಕೊಂಡಿದ್ದ ಶ್ರೀನಂದಾ, ಕೇವಲ 15 ನಿಮಿಷಗಳಲ್ಲಿ (5:35ಕ್ಕೆ) ನಾಪತ್ತೆಯಾಗಿದ್ದು, ಕುಟುಂಬದಲ್ಲಿ ಭಾರೀ ಆತಂಕ ಮೂಡಿಸಿತ್ತು.

ತೀವ್ರ ಹುಡುಕಾಟದ ಮೂರನೇ ದಿನದಂದು ಆಕೆಯ ಶವ ಪತ್ತೆಯಾಗಿದ್ದು, ಈ ಘಟನೆ ಕುಟುಂಬದವರನ್ನು ದುಃಖದ ಸಾಗರದಲ್ಲಿ ಮುಳುಗಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago