ಕುಂದಗೋಳ; ಸಾರ್ವಜನಿಕರ ಜೊತೆ ವ್ಯವಹರಿಸುವ ಆಹಾರ ಇಲಾಖೆ ಸಿಬ್ಬಂದಿ ವರ್ತನೆ ಸರಿಯಿಲ್ಲ ಸ್ವತಃ ಶಾಸಕರ ಪೋನ್ ಕರೆಯನ್ನೆ ಸ್ವೀಕಾರ ಮಾಡೊಲ್ಲ ಎಂದು ಶಾಸಕ ಎಮ್ ಆರ್ ಪಾಟೀಲ ಆಹಾರ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಅವರು ಕುಂದಗೋಳ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಿ, ಅರಣ್ಯ ಇಲಾಖೆ ಅಧಿಕಾರಿಗಳು ಕನಿಷ್ಠ ಮಟ್ಟಿಗಾದರೂ ಸಸಿ ನೆಡಿ, ತೋಟಗಾರಿಕೆ, ಕೃಷಿ ಇಲಾಖೆ ಬೀಜ ಗೊಬ್ಬರ ಕೊರತೆ ನಿವಾರಿಸಿ. ರೈತರಿಗೆ ಇನ್ಸೂರೆನ್ಸ್ ಬಗ್ಗೆ ತಿಳಿವಳಿಕೆ ನೀಡಿ ಎಂದರು.
ಇನ್ನುಳಿದಂತೆ ಕುಂದಗೋಳ ತಾಲೂಕಿನ 23 ಇಲಾಖೆಗಳ ವರದಿಯನ್ನು ಸಮಚಿತ್ತದಿಂದ ಎರಡು ಗಂಟೆ ಆಲಿಸಿದ ಶಾಸಕ ಆಲಿಸಿದ ಶಾಸಕ ಎಮ್ ಆರ್ ಪಾಟೀಲ ಅಧಿಕಾರಿಗಳಿಗೆ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಪಾಠ ಮಾಡಿದರು
ಸಭೆಯ ಆರಂಭಕ್ಕೂ ಮೊದಲು ಶಾಸಕರಿಗೆ ಸರ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ ಶುಭ ಹಾರೈಸಿದರು. ಇನ್ನೂ ಮೊದಲ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಎಮ್ ಆರ್ ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿದ್ದರು ಈ ವೇಳೆ ಅಧಿಕಾರಿಗಳು ಶಾಸಕರ ಮೊದಲ ಸಭೆಗೆ ಕಾಯುವ ಪ್ರಸಂಗ ಸಹ ಏರ್ಪಟ್ಟಿತು.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…