ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್ ಬಳಸುತ್ತಿದ್ದ ಆರೋಪ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.
ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಸಿದ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ನಲ್ಲಿ ಆ್ಯಂಡ್ರಾಯ್ಡ್ ಮೊಬೈಲ್ ಫೋನ್ ಪತ್ತೆಯಾಗಿದೆ ಎನ್ನಲಾಗಿದೆ. ಮತ್ತಷ್ಟು ಆಘಾತಕಾರಿ ವಿಚಾರವೆಂದರೆ, ಆ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳು ಕೂಡ ಪತ್ತೆಯಾಗಿವೆ ಎಂಬ ಮಾಹಿತಿ ಹೊರಬಿದ್ದಿದೆ.
ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿಯಲ್ಲ, ಸಜಾ ಬಂಧಿಯಾಗಿದ್ದರೂ ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಸಿದ್ದು ಹೇಗೆ ಎಂಬ ಪ್ರಶ್ನೆ ಇದೀಗ ಎದ್ದಿದೆ. ಜೊತೆಗೆ, ಜೈಲು ನಿಯಮದಂತೆ ಸಮವಸ್ತ್ರ ಧರಿಸಬೇಕಿದ್ದರೂ ಅವರು ಸಾಮಾನ್ಯ ಬಟ್ಟೆ ಧರಿಸುತ್ತಿದ್ದರು ಎಂದು ಜೈಲು ಡಿಜಿಪಿ ಅಲೋಕ್ ಕುಮಾರ್ ಹೇಳಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇದರ ನಡುವೆ, ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಬಣ್ಣಬಣ್ಣದ ಬಟ್ಟೆ ಧರಿಸಿ ಯಾರೊಂದಿಗೋ ಮೊಬೈಲ್ನಲ್ಲಿ ಮಾತನಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದೃಶ್ಯವೂ ಜೈಲಿನ ಭದ್ರತೆ ಹಾಗೂ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಸಾಮಾನ್ಯ ಕೈದಿಗಳಿಗೆ ಜೈಲಿನ ನಿಯಮಗಳು ಕಟ್ಟುನಿಟ್ಟಾಗಿ ಅನ್ವಯವಾಗುತ್ತಿರುವಾಗ, ಸಜಾ ಬಂಧಿಯಾಗಿರುವ ವ್ಯಕ್ತಿಯೊಬ್ಬನಿಗೆ ಮೊಬೈಲ್ ಸೇರಿದಂತೆ ಇಂತಹ ಸೌಲಭ್ಯಗಳು ಹೇಗೆ ದೊರಕಿದವು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಪ್ರಜ್ವಲ್ ರೇವಣ್ಣಗೆ ಇಂತಹ ಸೌಲಭ್ಯಗಳು ದೊರೆಯಲು ಜೈಲಿನೊಳಗಿಂದ ಯಾರಾದರೂ ಸಹಾಯ ಮಾಡಿದ್ದಾರೆಯೇ? ಮೊಬೈಲ್ ಜೈಲಿಗೆ ಹೇಗೆ ಪ್ರವೇಶಿಸಿತು? ಈ ನಿಯಮ ಉಲ್ಲಂಘನೆಗೆ ಹೊಣೆ ಯಾರು? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡಬೇಕಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…
ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…
ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…