Categories: LatestPolitics

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ ನಾಯಕರ ಹೇಳಿಕೆಗಳೇ. ಹಿಂದಿ ಹೇರಿಕೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಅವರ ಟೀಕೆ ಹಾಗೂ ಅದಕ್ಕೆ ಬಿಜೆಪಿ ನೀಡಿದ ಪ್ರತಿಕ್ರಿಯೆ ನಡುವೆಯೇ, ಇದೀಗ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.

ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಟೆರರಿಸ್ಟ್” ಎಂದು ಉಲ್ಲೇಖಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ತಾಪಮಾನವನ್ನು ಮತ್ತಷ್ಟು ಹೆಚ್ಚಿಸಿದೆ.

ತಮಿಳುನಾಡಿನಲ್ಲಿ AIADMK ಹಾಗೂ BJP ಮೈತ್ರಿಯನ್ನು ಪ್ರಶ್ನಿಸಿದ ಖರ್ಗೆ, “ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆ ಇಲ್ಲದ ಪಕ್ಷದೊಂದಿಗೆ ಕೈಜೋಡಿಸುವುದು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ” ಎಂದು ಟೀಕಿಸಿದರು. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇದಕ್ಕೂ ಮುನ್ನ ಅಂಬೇಡ್ಕರ್ ಜಯಂತಿಯಂದು ಮೋದಿ ಹಾಗೂ ಖರ್ಗೆ ನಡುವಿನ ಭೇಟಿಯೂ ಗಮನ ಸೆಳೆದಿತ್ತು. ಆದರೆ ಈಗಿನ ಹೇಳಿಕೆ ರಾಜಕೀಯವಾಗಿ ಹೊಸ ವಿವಾದಕ್ಕೆ ಕಾರಣವಾಗಿದೆ.

ಇತ್ತ, ತಮಿಳುನಾಡಿನಲ್ಲಿ DMK ನೇತೃತ್ವದ ಮೈತ್ರಿಯನ್ನು ಅಧಿಕಾರದಿಂದ ಕೆಳಗಿಳಿಸಲು NDA ತೀವ್ರ ಪ್ರಯತ್ನಗಳನ್ನು ಆರಂಭಿಸಿದೆ. ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಹಲವು ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದಾರೆ.

ಇನ್ನೊಂದೆಡೆ, ಕಾಂಗ್ರೆಸ್ ತನ್ನ ಸಂಪೂರ್ಣ ಶಕ್ತಿಯನ್ನು ತಮಿಳುನಾಡಿನಲ್ಲಿ ಹೂಡಿದ್ದು, ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇತ್ತೀಚೆಗೆ ಕೇರಳದಲ್ಲಿ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತವಾದ ಬಳಿಕ ಕ್ಷಮೆ ಕೇಳಿದ್ದ ಖರ್ಗೆ, ಇದೀಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಿಜೆಪಿ ಕಿಡಿಗೆ ಗುರಿಯಾಗಿದ್ದಾರೆ. ಬಿಜೆಪಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತಕ್ಷಣವೇ ಪ್ರಧಾನಮಂತ್ರಿಗಳ ಕ್ಷಮೆ ಕೇಳುವಂತೆ ಆಗ್ರಹಿಸಿದೆ.

ಚುನಾವಣೆ ಹೊತ್ತಿನಲ್ಲಿ ಈ ರೀತಿಯ ಹೇಳಿಕೆಗಳು ರಾಜಕೀಯ ತಾಪಮಾನವನ್ನು ಮತ್ತಷ್ಟು ಏರಿಸುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…

2 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

2 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

6 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

11 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

11 hours ago

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ…

11 hours ago