Categories: LatestPolitics

ಮೋದಿ ಮಿಮಿಕ್ರಿ ವಿವಾದ: LPG ಬೆಲೆ ಏರಿಕೆ ವ್ಯಂಗ್ಯಕ್ಕೆ ಶಿಕ್ಷಕ ಅಮಾನತು

ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನ ಶೈಲಿಯನ್ನು ಅಣಕಿಸಿ ಅಡುಗೆ ಅನಿಲ (LPG) ಬೆಲೆ ಏರಿಕೆಯನ್ನು ವ್ಯಂಗ್ಯಾತ್ಮಕವಾಗಿ ಹೇಳಿಕೊಂಡಿದ್ದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸಾಕೇತ್ ಪುರೋಹಿತ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಪೋಹರಿ ಬ್ಲಾಕ್‌ನ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಕೇತ್ ಪುರೋಹಿತ್ ಅವರು ಇತ್ತೀಚೆಗೆ ಒಂದು ಸಾಮಾಜಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಮಿಮಿಕ್ರಿ ಮಾಡಿದ್ದರು. ಈ ವೇಳೆ, “ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಜನರು ಮತ್ತೆ ಹಳೆಯ ಒಲೆಗಳ ಬಳಕೆಗೆ ಮರಳಬಹುದು; ಇದರಿಂದ ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಕಡಿಮೆಯಾಗಬಹುದು” ಎಂಬ ಅರ್ಥದಲ್ಲಿ ಅವರು ವ್ಯಂಗ್ಯವಾಡಿದ್ದರು ಎಂದು ಹೇಳಲಾಗಿದೆ. ಸುಮಾರು 58 ಸೆಕೆಂಡುಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

ಈ ವಿಡಿಯೋ ವೈರಲ್ ಆದ ಬಳಿಕ ಪಿಚೋರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಲೋಧಿ ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ದೂರು ಸಲ್ಲಿಸಿದ್ದರು. ಸರ್ಕಾರಿ ನೌಕರರಾಗಿ ಪ್ರಧಾನ ಮಂತ್ರಿಯನ್ನು ಸಾರ್ವಜನಿಕವಾಗಿ ಅಣಕಿಸುವುದು ಹಾಗೂ ಟೀಕಿಸುವುದು ನಾಗರಿಕ ಸೇವಾ ನಡಾವಳಿ ನಿಯಮಗಳ ಉಲ್ಲಂಘನೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ದೂರು ಆಧಾರವಾಗಿ ತನಿಖೆ ನಡೆಸಿದ ಜಿಲ್ಲಾ ಶಿಕ್ಷಣಾಧಿಕಾರಿ ವಿವೇಕ್ ಶ್ರೀವಾಸ್ತವ ಅವರು, ಸಾಕೇತ್ ಪುರೋಹಿತ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಅವರನ್ನು ಬದರ್ವಾಸ್ ಬ್ಲಾಕ್ ಶಿಕ್ಷಣ ಕಚೇರಿಗೆ ನಿಯೋಜಿಸಲಾಗಿದೆ. ಮಧ್ಯಪ್ರದೇಶ ನಾಗರಿಕ ಸೇವೆಗಳ ಕಾಯ್ದೆ, 1965ರ ಸಂಬಂಧಿತ ನಿಯಮಗಳಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯಿಸಿದ ಸಾಕೇತ್ ಪುರೋಹಿತ್, “ನಾನು ಕೇವಲ ಮನರಂಜನೆಗಾಗಿ ಮಿಮಿಕ್ರಿ ಮಾಡಿದ್ದೆ. ಯಾವುದೇ ದುರುದ್ದೇಶ ಇರಲಿಲ್ಲ. ನನ್ನಿಂದ ವಿವರಣೆ ಕೇಳದೆ ಏಕಪಕ್ಷೀಯವಾಗಿ ಅಮಾನತು ಮಾಡಿರುವುದು ನ್ಯಾಯಸಮ್ಮತವಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago