Latest

ಹಾಸನ ಆಸ್ಪತ್ರೆಯಲ್ಲಿ ನೈತಿಕ ಪೊಲೀಸ್ ಗಿರಿ: ಮೊಬೈಲ್ ಕಳವು ಆರೋಪಕ್ಕೆ ಯುವಕನ ಮೇಲೆ ಅಮಾನವೀಯ ಹಲ್ಲೆ

ಹಾಸನ: ಜಿಲ್ಲೆಯ ಮುಖ್ಯ ಆಸ್ಪತ್ರೆಯ ಆವರಣದಲ್ಲಿ ಮಾನವತೆಯ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ನಡೆದಿದೆ. ಮೊಬೈಲ್ ಕಳವು ಆರೋಪದ ಮೇಲೆ ಆಸ್ಪತ್ರೆಯ ಸೆಕ್ಯುರಿಟಿ ಸಿಬ್ಬಂದಿ ಹಾಗೂ ಕೆಲ ಖಾಸಗಿ ವ್ಯಕ್ತಿಗಳು ಸೇರಿ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಯುವಕನನ್ನು ಆಸ್ಪತ್ರೆಯ ಒಂದು ರೂಮಿಗೆ ತೆಗೆದುಕೊಂಡು ಮೊದಲು ತೀವ್ರವಾಗಿ ಥಳಿಸಲಾಗಿದೆ. ನಂತರ ನಡು ರಸ್ತೆಗೆ ಕರೆದುಕೊಂಡು ಹೋಗಿ ಮಳೆಯ ನಡುವೆಯೇ ಪೆಟ್ಟಿಗೆ ಪೆಟ್ಟಿಗೆ ಹೊಡೆದು ನರಳುವಂತೆ ಮಾಡಿದ್ದಾರೆ. ಎಷ್ಟೇ ಕೂಗಿ ಬೇಡಿಕೊಂಡರೂ, “ಇನ್ನು ಹೀಗೆ ಮಾಡಲ್ಲ ಸಾರ್, ಬಿಟ್ಟಿ ಬಿಡಿ” ಎಂದು ಕಾಲಿಗೆ ಬಿದ್ದು ಪ್ರಾರ್ಥನೆ ಮಾಡಿದರೂ ಸಹ ಕರುಣೆ ತೋರಿಲ್ಲ.

ಹಲ್ಲೆಗೊಳಗಾದ ಯುವಕನು ಭೀತಿಯಿಂದ ನೆಲಕ್ಕು ಬಿದ್ದು ಗೋಳಾಡುತ್ತಿದ್ದಾಗಲೂ ಕಿಡಿಗೇಡಿಗಳು ಬಿಟ್ಟುಬಿಡದೆ ಹಲ್ಲೆ ಮುಂದುವರೆಸಿದ್ದು, ಆರುಚಿಯ ತರಂಗ ಎಬ್ಬಿಸಿದೆ. ಅಷ್ಟರಲ್ಲೇ ಅಲ್ಲ, ಹಾಸನ ತಾಲೂಕು ಪೊಲೀಸ್ ಠಾಣೆ ಹತ್ತಿರವೇ ಇದ್ದರೂ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಅಲ್ಲದೆ, ಕೆಲ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಕೂಡ ನಿರ್ಲಕ್ಷ್ಯದಿಂದ ಈ ಹಲ್ಲೆಯನ್ನು ಕಣ್ತುಂಬಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ವೀಡಿಯೊ ದೃಶ್ಯಗಳು ಹರಿದಾಡುತ್ತಿರುವ ಸಾರ್ವಜನಿಕರ ಕಣ್ಣು ತೆರೆಯುವಂತಿದ್ದು, “ಯಾವ ಅಧಿಕಾರದಿಂದ ಇವರು ಶಿಕ್ಷೆ ನೀಡುತ್ತಿದ್ದಾರೆ?” ಎಂಬ ಪ್ರಶ್ನೆ ಎದ್ದಿದೆ. ತಪ್ಪು ಮಾಡಿದರೆ ಕ್ರಮ ಕೈಗೊಳ್ಳುವುದು ಕಾನೂನಿನ ಕೆಲಸ. ಆದರೆ ಈ ರೀತಿಯ ಕ್ರೂರ ಮರಣದಂಡನೆಯಂತಿರುವ ಹಲ್ಲೆ ಕೇವಲ ನೈತಿಕ ಪೊಲೀಸ್ ಗಿರಿ ಎನ್ನಬಹುದು.

ಘಟನೆ ಸಂಬಂಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಿ ಪರಿಸ್ಥಿತಿಯಲ್ಲಿ ಮಾದರಿಯಾಗಬೇಕಾದ ಆರೋಗ್ಯ ಸಂಸ್ಥೆಯ ಆವರಣವೇ ಹಿಂಸಾಚಾರದ ಮೈದಾನವಾಗಿ ಮಾರ್ಪಟ್ಟಿರುವುದು ವಿಪರ್ಯಾಸವಲ್ಲವೇ?

ಹಕ್ಕುಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ತೀರ್ಪುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago