Latest

ಹಾಸನ ಆಸ್ಪತ್ರೆಯಲ್ಲಿ ನೈತಿಕ ಪೊಲೀಸ್ ಗಿರಿ: ಮೊಬೈಲ್ ಕಳವು ಆರೋಪಕ್ಕೆ ಯುವಕನ ಮೇಲೆ ಅಮಾನವೀಯ ಹಲ್ಲೆ

ಹಾಸನ: ಜಿಲ್ಲೆಯ ಮುಖ್ಯ ಆಸ್ಪತ್ರೆಯ ಆವರಣದಲ್ಲಿ ಮಾನವತೆಯ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ನಡೆದಿದೆ. ಮೊಬೈಲ್ ಕಳವು ಆರೋಪದ ಮೇಲೆ ಆಸ್ಪತ್ರೆಯ ಸೆಕ್ಯುರಿಟಿ ಸಿಬ್ಬಂದಿ ಹಾಗೂ ಕೆಲ ಖಾಸಗಿ ವ್ಯಕ್ತಿಗಳು ಸೇರಿ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಯುವಕನನ್ನು ಆಸ್ಪತ್ರೆಯ ಒಂದು ರೂಮಿಗೆ ತೆಗೆದುಕೊಂಡು ಮೊದಲು ತೀವ್ರವಾಗಿ ಥಳಿಸಲಾಗಿದೆ. ನಂತರ ನಡು ರಸ್ತೆಗೆ ಕರೆದುಕೊಂಡು ಹೋಗಿ ಮಳೆಯ ನಡುವೆಯೇ ಪೆಟ್ಟಿಗೆ ಪೆಟ್ಟಿಗೆ ಹೊಡೆದು ನರಳುವಂತೆ ಮಾಡಿದ್ದಾರೆ. ಎಷ್ಟೇ ಕೂಗಿ ಬೇಡಿಕೊಂಡರೂ, “ಇನ್ನು ಹೀಗೆ ಮಾಡಲ್ಲ ಸಾರ್, ಬಿಟ್ಟಿ ಬಿಡಿ” ಎಂದು ಕಾಲಿಗೆ ಬಿದ್ದು ಪ್ರಾರ್ಥನೆ ಮಾಡಿದರೂ ಸಹ ಕರುಣೆ ತೋರಿಲ್ಲ.

ಹಲ್ಲೆಗೊಳಗಾದ ಯುವಕನು ಭೀತಿಯಿಂದ ನೆಲಕ್ಕು ಬಿದ್ದು ಗೋಳಾಡುತ್ತಿದ್ದಾಗಲೂ ಕಿಡಿಗೇಡಿಗಳು ಬಿಟ್ಟುಬಿಡದೆ ಹಲ್ಲೆ ಮುಂದುವರೆಸಿದ್ದು, ಆರುಚಿಯ ತರಂಗ ಎಬ್ಬಿಸಿದೆ. ಅಷ್ಟರಲ್ಲೇ ಅಲ್ಲ, ಹಾಸನ ತಾಲೂಕು ಪೊಲೀಸ್ ಠಾಣೆ ಹತ್ತಿರವೇ ಇದ್ದರೂ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಅಲ್ಲದೆ, ಕೆಲ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಕೂಡ ನಿರ್ಲಕ್ಷ್ಯದಿಂದ ಈ ಹಲ್ಲೆಯನ್ನು ಕಣ್ತುಂಬಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ವೀಡಿಯೊ ದೃಶ್ಯಗಳು ಹರಿದಾಡುತ್ತಿರುವ ಸಾರ್ವಜನಿಕರ ಕಣ್ಣು ತೆರೆಯುವಂತಿದ್ದು, “ಯಾವ ಅಧಿಕಾರದಿಂದ ಇವರು ಶಿಕ್ಷೆ ನೀಡುತ್ತಿದ್ದಾರೆ?” ಎಂಬ ಪ್ರಶ್ನೆ ಎದ್ದಿದೆ. ತಪ್ಪು ಮಾಡಿದರೆ ಕ್ರಮ ಕೈಗೊಳ್ಳುವುದು ಕಾನೂನಿನ ಕೆಲಸ. ಆದರೆ ಈ ರೀತಿಯ ಕ್ರೂರ ಮರಣದಂಡನೆಯಂತಿರುವ ಹಲ್ಲೆ ಕೇವಲ ನೈತಿಕ ಪೊಲೀಸ್ ಗಿರಿ ಎನ್ನಬಹುದು.

ಘಟನೆ ಸಂಬಂಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಿ ಪರಿಸ್ಥಿತಿಯಲ್ಲಿ ಮಾದರಿಯಾಗಬೇಕಾದ ಆರೋಗ್ಯ ಸಂಸ್ಥೆಯ ಆವರಣವೇ ಹಿಂಸಾಚಾರದ ಮೈದಾನವಾಗಿ ಮಾರ್ಪಟ್ಟಿರುವುದು ವಿಪರ್ಯಾಸವಲ್ಲವೇ?

ಹಕ್ಕುಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ತೀರ್ಪುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

20 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

20 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago