Latest

ಹಾಸನ ಆಸ್ಪತ್ರೆಯಲ್ಲಿ ನೈತಿಕ ಪೊಲೀಸ್ ಗಿರಿ: ಮೊಬೈಲ್ ಕಳವು ಆರೋಪಕ್ಕೆ ಯುವಕನ ಮೇಲೆ ಅಮಾನವೀಯ ಹಲ್ಲೆ

ಹಾಸನ: ಜಿಲ್ಲೆಯ ಮುಖ್ಯ ಆಸ್ಪತ್ರೆಯ ಆವರಣದಲ್ಲಿ ಮಾನವತೆಯ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ನಡೆದಿದೆ. ಮೊಬೈಲ್ ಕಳವು ಆರೋಪದ ಮೇಲೆ ಆಸ್ಪತ್ರೆಯ ಸೆಕ್ಯುರಿಟಿ ಸಿಬ್ಬಂದಿ ಹಾಗೂ ಕೆಲ ಖಾಸಗಿ ವ್ಯಕ್ತಿಗಳು ಸೇರಿ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ.

ಯುವಕನನ್ನು ಆಸ್ಪತ್ರೆಯ ಒಂದು ರೂಮಿಗೆ ತೆಗೆದುಕೊಂಡು ಮೊದಲು ತೀವ್ರವಾಗಿ ಥಳಿಸಲಾಗಿದೆ. ನಂತರ ನಡು ರಸ್ತೆಗೆ ಕರೆದುಕೊಂಡು ಹೋಗಿ ಮಳೆಯ ನಡುವೆಯೇ ಪೆಟ್ಟಿಗೆ ಪೆಟ್ಟಿಗೆ ಹೊಡೆದು ನರಳುವಂತೆ ಮಾಡಿದ್ದಾರೆ. ಎಷ್ಟೇ ಕೂಗಿ ಬೇಡಿಕೊಂಡರೂ, “ಇನ್ನು ಹೀಗೆ ಮಾಡಲ್ಲ ಸಾರ್, ಬಿಟ್ಟಿ ಬಿಡಿ” ಎಂದು ಕಾಲಿಗೆ ಬಿದ್ದು ಪ್ರಾರ್ಥನೆ ಮಾಡಿದರೂ ಸಹ ಕರುಣೆ ತೋರಿಲ್ಲ.

ಹಲ್ಲೆಗೊಳಗಾದ ಯುವಕನು ಭೀತಿಯಿಂದ ನೆಲಕ್ಕು ಬಿದ್ದು ಗೋಳಾಡುತ್ತಿದ್ದಾಗಲೂ ಕಿಡಿಗೇಡಿಗಳು ಬಿಟ್ಟುಬಿಡದೆ ಹಲ್ಲೆ ಮುಂದುವರೆಸಿದ್ದು, ಆರುಚಿಯ ತರಂಗ ಎಬ್ಬಿಸಿದೆ. ಅಷ್ಟರಲ್ಲೇ ಅಲ್ಲ, ಹಾಸನ ತಾಲೂಕು ಪೊಲೀಸ್ ಠಾಣೆ ಹತ್ತಿರವೇ ಇದ್ದರೂ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ. ಅಲ್ಲದೆ, ಕೆಲ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರೂ ಕೂಡ ನಿರ್ಲಕ್ಷ್ಯದಿಂದ ಈ ಹಲ್ಲೆಯನ್ನು ಕಣ್ತುಂಬಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ವೀಡಿಯೊ ದೃಶ್ಯಗಳು ಹರಿದಾಡುತ್ತಿರುವ ಸಾರ್ವಜನಿಕರ ಕಣ್ಣು ತೆರೆಯುವಂತಿದ್ದು, “ಯಾವ ಅಧಿಕಾರದಿಂದ ಇವರು ಶಿಕ್ಷೆ ನೀಡುತ್ತಿದ್ದಾರೆ?” ಎಂಬ ಪ್ರಶ್ನೆ ಎದ್ದಿದೆ. ತಪ್ಪು ಮಾಡಿದರೆ ಕ್ರಮ ಕೈಗೊಳ್ಳುವುದು ಕಾನೂನಿನ ಕೆಲಸ. ಆದರೆ ಈ ರೀತಿಯ ಕ್ರೂರ ಮರಣದಂಡನೆಯಂತಿರುವ ಹಲ್ಲೆ ಕೇವಲ ನೈತಿಕ ಪೊಲೀಸ್ ಗಿರಿ ಎನ್ನಬಹುದು.

ಘಟನೆ ಸಂಬಂಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಿ ಪರಿಸ್ಥಿತಿಯಲ್ಲಿ ಮಾದರಿಯಾಗಬೇಕಾದ ಆರೋಗ್ಯ ಸಂಸ್ಥೆಯ ಆವರಣವೇ ಹಿಂಸಾಚಾರದ ಮೈದಾನವಾಗಿ ಮಾರ್ಪಟ್ಟಿರುವುದು ವಿಪರ್ಯಾಸವಲ್ಲವೇ?

ಹಕ್ಕುಗಳ ಉಲ್ಲಂಘನೆ ಮತ್ತು ಕಾನೂನು ಬಾಹಿರ ತೀರ್ಪುಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago