Latest

ಹೆರಿಗೆಯ ಬಳಿಕ ತಾಯಿ ಪರಾರಿ.!: ಕೋಲಾರ ಆಸ್ಪತ್ರೆಯಲ್ಲಿ ಅನಾಥವಾಗಿದ ಹೆಣ್ಣು ಮಗು

ಕೋಲಾರ: ರಾಜ್ಯದಲ್ಲಿ ದಿನೇದಿನಕ್ಕೂ ವಿಚಿತ್ರ ಹಾಗೂ ದುಃಖದ ಘಟನೆಗಳು ಬೆಳಕಿಗೆ ಬರುತ್ತಿದ್ದು, ಇದೀಗ ಕೋಲಾರದಿಂದ ಮತ್ತೊಂದು ಹೃದಯವಿದ್ರಾವಕ ಪ್ರಸಂಗ ವರದಿಯಾಗಿದೆ. ಹೆರಿಗೆಯ ಬಳಿಕ ತಾಯಿ ತನ್ನ ನವಜಾತ ಶಿಶುವನ್ನು ಬಿಟ್ಟು ಆಸ್ಪತ್ರೆಯಿಂದ ಪರಾರಿಯಾದ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಮಂಗಳವಾರ ಸಂಜೆ ಸುಮಾರು 7.30ರ ಸುಮಾರಿಗೆ ಮೌನಿಕಾ ಎಂಬ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ನಾರ್ಮಲ್ ಡಿಲಿವರಿ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತುರ್ತು ಪರಿಸ್ಥಿತಿ ಇದ್ದುದರಿಂದ, ವೈದ್ಯೆ ಡಾ. ಶಾಂತ ಮಾನವೀಯತೆ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದ್ದರು. ಆದರೆ ಡಿಲಿವರಿಯ ಬಳಿಕ ತಾಯಿ ಮಗುವಿನ ಬಗ್ಗೆ ಯಾವುದೇ ಜವಾಬ್ದಾರಿ ಒಪ್ಪಿಕೊಳ್ಳದೆ, ನಕಲಿ ವಿಳಾಸ ಹಾಗೂ ಸುಳ್ಳು ಮಾಹಿತಿ ನೀಡಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾಳೆ.

ಮೌನಿಕಾ ಚಿಕ್ಕಬಳ್ಳಾಪುರದ ಪೇರೆಸಂದ್ರದ ಶ್ರೀನಿವಾಸ್ ಎಂಬುವರ ಪತ್ನಿ ಎಂದು ಪ್ರಸ್ತಾಪಿಸಿದರೋಡೂ, ನೀಡಿದ ಮೊಬೈಲ್ ಸಂಖ್ಯೆಗೆ ಸಂಪರ್ಕ ಸಾಧಿಸಲು ಯತ್ನಿಸಿದಾಗ ‘ರಾಂಗ್ ನಂಬರ್’ ಎಂದು ಪ್ರತಿಕ್ರಿಯೆ ಬಂದಿದೆ. ಮೇಲಾಗಿ ನೀಡಿದ ವಿಳಾಸವೂ ತಪ್ಪಾಗಿದ್ದು, ಸಿಬ್ಬಂದಿ ತತ್ತರಿಸಿದ್ದಾರೆ. ಮೌನಿಕಾಳೊಂದಿಗೆ ಬಂದಿದ್ದ ವೃದ್ಧೆಯೂ ಕೂಡ ಪತ್ತೆಯಾಗದೆ ಮಾಯವಾಗಿದ್ದಾಳೆ ಎನ್ನಲಾಗಿದೆ.

ಅಗತ್ಯ ದಾಖಲೆಗಳಿಲ್ಲದೆ ಆಸ್ಪತ್ರೆಗೆ ಆಗಮಿಸಿದ ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿರುವುದರಿಂದ, ಆಸ್ಪತ್ರೆಯ ಸಿಬ್ಬಂದಿ ಹಾಗೂ ಭದ್ರತಾ ವ್ಯವಸ್ಥೆಯ ವೈಫಲ್ಯ ಎತ್ತಿ ಹಿಡಿಯಲಾಗಿದೆ. ತಾಯಿ ಮಗು ಬಿಟ್ಟು ಓಡಿದ ವಿಷಯ ತಿಳಿದ ನಂತರ ಪೊಲೀಸರು ಕೂಡ ನಡುಗಿದ್ದಾರೆ. ಸದ್ಯ ಆಸ್ಪತ್ರೆಯ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತಾಯಿಯನ್ನು ಪತ್ತೆಹಚ್ಚಲು ಕೋಲಾರ ನಗರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ದುರಂತ ಎಂದರೆ ಈಕೆಗೆ 19 ವರ್ಷ ವಯಸ್ಸು. ಈ ಚಿಕ್ಕ ವಯಸ್ಸಲ್ಲೇ ಎಂತಹ ಕ್ರೂರ ಮನಸ್ಸಿನ ಮಹಿಳೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಇಂದು ಬೆಳಿಗ್ಗೆ ಟೀ ಕುಡಿದು ಬರೋದಾಗಿ ಹೇಳಿ ಆಕೆ ಎಸ್ಕೇಪ್ ಆಗಿದ್ದಾಳೆ. ಅಲ್ಲದೆ ಈಕೆಯ ಜೊತೆ ಬಂದಿದ್ದ ವೃದ್ಧೆಯು ಸಹ ಪಲಾಯನ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಈ ಘಟನೆ ರಾಜ್ಯದ ಆರೋಗ್ಯ ವ್ಯವಸ್ಥೆಯ ಮೇಲೆಯೂ ಪ್ರಶ್ನೆ ಎಬ್ಬಿಸುತ್ತಿದ್ದು, ಅದೆಷ್ಟೆ ತೊಂದರೆಗಳು ಇದ್ದರೂ ಹೆಣ್ಣು ಮಗುವನ್ನು ತಿರಸ್ಕರಿಸುವ ಪಂಥವೋ ಎನ್ನುವ ಆಕ್ರೋಶ ಕೂಡ ಸಾಮಾಜಿಕ ವಲಯದಲ್ಲಿ ವ್ಯಕ್ತವಾಗಿದೆ.

ತಾಯಿಯ ಆಶ್ರಯವಿಲ್ಲದೇ ಉಳಿದ ನವಜಾತ ಶಿಶುವಿಗೆ ಈಗ ಆಸ್ಪತ್ರೆಯ ಸಿಬ್ಬಂದಿಯೇ ಆಶ್ರಯವಾಗಿದ್ದಾರೆ. ಕೇವಲ 1.5 ಕೆ.ಜಿ. ತೂಕವಿರುವ ಮಗು ಇದೀಗ ಬೇರೆಯವರ ಎದೆ ಹಾಲಿನಿಂದ ಪೋಷಣೆಯಾಗುತ್ತಿದ್ದು, ವೈದ್ಯರು ಹಾಗೂ ನರ್ಸ್‌ಗಳು ವಿಶೇಷ ಕಾಳಜಿಯಲ್ಲಿ ಶಿಶುವಿನ ಆರೈಕೆಯಲ್ಲಿ ತೊಡಗಿದ್ದಾರೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

19 minutes ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

21 minutes ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

23 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

53 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

1 hour ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

2 hours ago