ಕೃಷಿ ಹೊಂಡದಲ್ಲಿ ಮುಳುಗಿ ತಾಯಿ-ಮಗ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಸಂಭವಿಸಿದೆ. ಕೋಳೂರು ಗ್ರಾಮದ ರೂಪಾ (35) ಹಾಗೂ ಮಗ (Son) ಹೇಮಂತ್ (9) ಮೃತ ದುರ್ದೈವಿಗಳು. ತಾಯಿ, ಅಜ್ಜಿ ಜೊತೆಬಾಲಕ ಕುರಿ ಮೇಯಿಸಲು ಹೋಗಿದ್ದ. ಈ ವೇಳೆ ಬಾಲಕ ಹೇಮಂತ್ ಕೃಷಿ ಹೊಂಡದಲ್ಲಿ ಕೈ, ಕಾಲು ತೊಳೆಯಲು ಹೋದಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ.
ಮಗ ಮುಳುಗಿದ್ದನ್ನ ಕಂಡ ತಾಯಿ ಆತನ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯೂ ಮಗನ ಜೊತೆ ನೀರಿನಲ್ಲಿ ಮುಳುಗಿದ್ದಾಳೆ. ಅಲ್ಲೇ ಇದ್ದ ಅಜ್ಜಿ ಸಹ ರಕ್ಷಣೆಗೆ ಮುಂದಾಗಿದ್ದು, ಆಕೆಯೂ ಮುಳುಗುತ್ತಿದ್ದಾಗ ಬಾಲಕಿಯೋರ್ವಳು ಆಕೆಗೆ ಡ್ರಿಪ್ ಪೈಪ್ ನೀಡಿ ಪಾರು ಮಾಡಿದ್ದಾಳೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಕಣ್ಣುಗಳನ್ನು ದಾನ ಮಾಡಿ ಸಾವನಲ್ಲೂ ಸಹ ಸಾರ್ಥಕತೆ ಮೆರೆದಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…