Latest

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ-ಮಗ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ತಾಯಿ-ಮಗ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಸಂಭವಿಸಿದೆ. ಕೋಳೂರು ಗ್ರಾಮದ ರೂಪಾ (35) ಹಾಗೂ ಮಗ (Son) ಹೇಮಂತ್ (9) ಮೃತ ದುರ್ದೈವಿಗಳು. ತಾಯಿ, ಅಜ್ಜಿ ಜೊತೆಬಾಲಕ ಕುರಿ ಮೇಯಿಸಲು ಹೋಗಿದ್ದ. ಈ ವೇಳೆ ಬಾಲಕ ಹೇಮಂತ್ ಕೃಷಿ ಹೊಂಡದಲ್ಲಿ ಕೈ, ಕಾಲು ತೊಳೆಯಲು ಹೋದಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ.
ಮಗ ಮುಳುಗಿದ್ದನ್ನ ಕಂಡ ತಾಯಿ ಆತನ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯೂ ಮಗನ ಜೊತೆ ನೀರಿನಲ್ಲಿ ಮುಳುಗಿದ್ದಾಳೆ. ಅಲ್ಲೇ ಇದ್ದ ಅಜ್ಜಿ ಸಹ ರಕ್ಷಣೆಗೆ ಮುಂದಾಗಿದ್ದು, ಆಕೆಯೂ ಮುಳುಗುತ್ತಿದ್ದಾಗ ಬಾಲಕಿಯೋರ್ವಳು ಆಕೆಗೆ ಡ್ರಿಪ್ ಪೈಪ್‌ ನೀಡಿ ಪಾರು ಮಾಡಿದ್ದಾಳೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಕಣ್ಣುಗಳನ್ನು ದಾನ ಮಾಡಿ ಸಾವನಲ್ಲೂ ಸಹ ಸಾರ್ಥಕತೆ ಮೆರೆದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

3 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

13 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

13 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

1 day ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

1 day ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

1 day ago