ಚಿಕ್ಕಬಳ್ಳಾಪುರ: ಎತ್ತುವ ಕೈ ತಾಯಿಯದ್ದೇ, ಕಾಪಾಡುವ ನೆರಳು ತಾಯಿಯದ್ದೇ ಎನ್ನಲಾಗುವುದು. ಆದರೆ ಇಲ್ಲೊಬ್ಬ ತಾಯಿ ಬದುಕಿನ ಬವಣೆ ತಾಳಲಾಗದೇ ತನ್ನ ಒಂದೇ ವರ್ಷದ ಮಗುವಿನ ಕಣ್ಣೆದುರೇ ಜೀವ ಕೊಳೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ನಗರದ ಸಿಎಂಸಿ ಬಡಾವಣೆಯಲ್ಲಿ 23 ವರ್ಷದ ಝಾನ್ಸಿ ಎಂಬ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶನಿವಾರ ರಾತ್ರಿ ಬೆಳಕಿಗೆ ಬಂದಿದೆ. ಈ ವೇಳೆ ಆಕೆಯ ಮಗು ತಾಯಿಯ ಮೃತದೇಹದ ಬಳಿ ಕಂಗಾಲಾಗಿ ಮಲಗಿದ್ದ ದೃಶ್ಯ ಭಾವುಕತೆಯ ಶಿಖರಕ್ಕೇರಿಸಿದೆ.
ಝಾನ್ಸಿಯ ಪತಿ ಈಶ್ವರ್ ಕ್ರೈನ್ ಅಪರೇಟರ್ ಆಗಿದ್ದು, ಅವರು ಊಟಕ್ಕಾಗಿ ಮನೆಗೆ ಬಂದಾಗ ಪತ್ನಿಯನ್ನು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ತಕ್ಷಣವೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಆಘಾತಕಾರಿ ದೃಶ್ಯವನ್ನು ಕಂಡು ಸ್ಥಳೀಯರೂ ಕೂಡ ಕಣ್ಣೀರಾಗಿದ್ದಾರೆ.
ಈ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಕುಟುಂಬದಲ್ಲಿ ಯಾವುದೇ ಕಲಹವೇನಿದ್ದೋ, ಅಥವಾ ಆಂತರಿಕ ದಾಳವೋ ಎಂಬುದು ಪೋಲಿಸ್ ತನಿಖೆಯಿಂದ ಮಾತ್ರ ಸ್ಪಷ್ಟವಾಗಬೇಕಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದುರ್ಘಟನೆಯ ಹಿಂದೆ ಏನೆಲ್ಲಾ ಕಾರಣಗಳಿವೆ ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…