Latest

ರೈಲ್ವೆ ಟ್ರ್ಯಾಕ್​ ಮೇಲೆ ರೀಲ್ಸ್​ ಮಾಡಿದ ತಾಯಿ – ಮಗಳು; ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ದಾಖಲು!

ಅಬ್​ ತೇರೆ ಬಿನ್​ ಹಮ್​ ಝೀ ಲೇಂಗೆ ಎಂಬ ಹಾಡಿಗೆ ರೈಲ್ವೆ ಟ್ರ್ಯಾಕ್​​ನಲ್ಲಿ ತಾಯಿ ಹೆಜ್ಜೆ ಹಾಕಿದರೆ ಮಗಳು ಅದನ್ನು ರೆಕಾರ್ಡ್ ಮಾಡಿದ್ದಾಳೆ. ರೈಲು ಹಳಿಗಳ ಮೇಲೆ ತಾಯಿ ತನ್ನ ನೃತ್ಯ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದರೆ ಮಗಳು ಇದನ್ನು ಮೊಬೈಲ್​ ಕ್ಯಾಮರಾದಲ್ಲಿ ಶೂಟ್​ ಮಾಡುತ್ತಿದ್ದಳು ಎನ್ನಲಾಗಿದೆ.
ವೈರಲ್​ ಆಗಿರುವ ಈ ವಿಡಿಯೋದಲ್ಲಿ, ತಾಯಿ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರೋದನ್ನು ಕಾಣಬಹುದಾಗಿದೆ. ಬಳಿಕ ರೈಲು ಹಳಿಗಳ ತಾಯಿ ನೃತ್ಯ ಪ್ರದರ್ಶಿಸಿದ್ದಾರೆ. ಆಗ್ರಾದ ಫೋರ್ಟ್​ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ರೈಲು ಹಳಿಗಳ ಮೇಲೆ ನೃತ್ಯ ಮಾಡಿದ ಮಹಿಳೆಯನ್ನು ಮೀನಾ ಸಿಂಗ್​ ಎಂದು ಗುರುತಿಸಲಾಗಿದೆ. ಮೀನಾ ಸಿಂಗ್​ ಸ್ವಂತ ಯುಟ್ಯೂಬ್​ ಚಾನೆಲ್​ ಹೊಂದಿದ್ದು ಇದರಲ್ಲಿ 47 ಸಾವಿರಕ್ಕೂ ಅಧಿಕ ಸಬ್​ಸ್ಕ್ರೈಬರ್​ ಹೊಂದಿದ್ದಾಳೆ. ಈಕೆಯ ಯುಟ್ಯೂಬ್​ ಚಾನೆಲ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಮಾಡಿದ ಇನ್ನೂ ಅನೇಕ ವಿಡಿಯೋಗಳನ್ನು ಕಾಣಬಹುದಾಗಿದೆ. ರೈಲ್ವೆ ಹಳಿಗಳ ಮೇಲೆ ಈ ಮಹಿಳೆ ಭೋಜ್​ಪುರಿ ಹಾಡಿಗೆ ಕುಣಿದಿದ್ದು ಆ ಸಂದರ್ಭದಲ್ಲಿ ರೈಲು ಹಳಿಗಳ ಮೇಲೆ ಬಂದಿದೆ. ರೈಲು ಬಂದರೂ ಕ್ಯಾರೆ ಎನ್ನದೇ ಮೀನಾ ಸಿಂಗ್​ ತನ್ನ ಪಾಡಿಗೆ ತಾನು ರೀಲ್ಸ್​ ಮಾಡೋದ್ರಲ್ಲಿ ಬ್ಯುಸಿ ಆಗಿದ್ದರು.
ಮೀನಾ ಸಿಂಗ್​ರ ಈ ವೈರಲ್​ ವಿಡಿಯೋ ಎಲ್ಲೆಡೆ ಸಾಕಷ್ಟು ವಿರೋಧಕ್ಕೆ ಕಾರಣವಾಗುತ್ತಿದ್ದಂತೆಯೇ ಈಕೆಯ ವಿರುದ್ಧ ರೈಲ್ವೆ ಕಾಯ್ದೆ 145 ಹಾಗೂ 147 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಾಯಿ ಹಾಗೂ ಮಹಿಳೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇನ್ಮೇಲೆ ಈ ರೀತಿಯ ಕೃತ್ಯ ಎಸಗುವುದಿಲ್ಲ ಎಂದು ತಾಯಿ ಮಗಳು ತಪ್ಪೊಪ್ಪಿಗೆ ನೀಡಿದ ಬಳಿಕ ಇಬ್ಬರಿಗೂ ಜಾಮೀನು ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago