Latest

ರೈಲ್ವೆ ಟ್ರ್ಯಾಕ್​ ಮೇಲೆ ರೀಲ್ಸ್​ ಮಾಡಿದ ತಾಯಿ – ಮಗಳು; ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ದಾಖಲು!

ಅಬ್​ ತೇರೆ ಬಿನ್​ ಹಮ್​ ಝೀ ಲೇಂಗೆ ಎಂಬ ಹಾಡಿಗೆ ರೈಲ್ವೆ ಟ್ರ್ಯಾಕ್​​ನಲ್ಲಿ ತಾಯಿ ಹೆಜ್ಜೆ ಹಾಕಿದರೆ ಮಗಳು ಅದನ್ನು ರೆಕಾರ್ಡ್ ಮಾಡಿದ್ದಾಳೆ. ರೈಲು ಹಳಿಗಳ ಮೇಲೆ ತಾಯಿ ತನ್ನ ನೃತ್ಯ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದರೆ ಮಗಳು ಇದನ್ನು ಮೊಬೈಲ್​ ಕ್ಯಾಮರಾದಲ್ಲಿ ಶೂಟ್​ ಮಾಡುತ್ತಿದ್ದಳು ಎನ್ನಲಾಗಿದೆ.
ವೈರಲ್​ ಆಗಿರುವ ಈ ವಿಡಿಯೋದಲ್ಲಿ, ತಾಯಿ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರೋದನ್ನು ಕಾಣಬಹುದಾಗಿದೆ. ಬಳಿಕ ರೈಲು ಹಳಿಗಳ ತಾಯಿ ನೃತ್ಯ ಪ್ರದರ್ಶಿಸಿದ್ದಾರೆ. ಆಗ್ರಾದ ಫೋರ್ಟ್​ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ರೈಲು ಹಳಿಗಳ ಮೇಲೆ ನೃತ್ಯ ಮಾಡಿದ ಮಹಿಳೆಯನ್ನು ಮೀನಾ ಸಿಂಗ್​ ಎಂದು ಗುರುತಿಸಲಾಗಿದೆ. ಮೀನಾ ಸಿಂಗ್​ ಸ್ವಂತ ಯುಟ್ಯೂಬ್​ ಚಾನೆಲ್​ ಹೊಂದಿದ್ದು ಇದರಲ್ಲಿ 47 ಸಾವಿರಕ್ಕೂ ಅಧಿಕ ಸಬ್​ಸ್ಕ್ರೈಬರ್​ ಹೊಂದಿದ್ದಾಳೆ. ಈಕೆಯ ಯುಟ್ಯೂಬ್​ ಚಾನೆಲ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಮಾಡಿದ ಇನ್ನೂ ಅನೇಕ ವಿಡಿಯೋಗಳನ್ನು ಕಾಣಬಹುದಾಗಿದೆ. ರೈಲ್ವೆ ಹಳಿಗಳ ಮೇಲೆ ಈ ಮಹಿಳೆ ಭೋಜ್​ಪುರಿ ಹಾಡಿಗೆ ಕುಣಿದಿದ್ದು ಆ ಸಂದರ್ಭದಲ್ಲಿ ರೈಲು ಹಳಿಗಳ ಮೇಲೆ ಬಂದಿದೆ. ರೈಲು ಬಂದರೂ ಕ್ಯಾರೆ ಎನ್ನದೇ ಮೀನಾ ಸಿಂಗ್​ ತನ್ನ ಪಾಡಿಗೆ ತಾನು ರೀಲ್ಸ್​ ಮಾಡೋದ್ರಲ್ಲಿ ಬ್ಯುಸಿ ಆಗಿದ್ದರು.
ಮೀನಾ ಸಿಂಗ್​ರ ಈ ವೈರಲ್​ ವಿಡಿಯೋ ಎಲ್ಲೆಡೆ ಸಾಕಷ್ಟು ವಿರೋಧಕ್ಕೆ ಕಾರಣವಾಗುತ್ತಿದ್ದಂತೆಯೇ ಈಕೆಯ ವಿರುದ್ಧ ರೈಲ್ವೆ ಕಾಯ್ದೆ 145 ಹಾಗೂ 147 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಾಯಿ ಹಾಗೂ ಮಹಿಳೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇನ್ಮೇಲೆ ಈ ರೀತಿಯ ಕೃತ್ಯ ಎಸಗುವುದಿಲ್ಲ ಎಂದು ತಾಯಿ ಮಗಳು ತಪ್ಪೊಪ್ಪಿಗೆ ನೀಡಿದ ಬಳಿಕ ಇಬ್ಬರಿಗೂ ಜಾಮೀನು ನೀಡಲಾಗಿದೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

19 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

19 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

19 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago