Crime

ಮಗನ ಕ್ರೌರ್ಯಕ್ಕೆ ತಾಯಿಯ ಬಲಿ.!: ಗಾಜಿನಿಂದ ಇರಿದು ಭೀಕರ ಹತ್ಯೆ

ಹುಬ್ಬಳ್ಳಿಯ ತೊರವಿ ಹಕ್ಕಲ ಪ್ರದೇಶದಲ್ಲಿ ತಾಯಿಯೊಬ್ಬರು ತನ್ನ ಮಗನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಕಾರಣದ ಮೇಲೆ ಮಗನಿಂದಲೇ ಹತ್ಯೆಗೀಡಾದ ಭೀಕರ ಘಟನೆ ನಡೆದಿದೆ. ಈ ದುರ್ಘಟನೆ ಗುರುವಾರ ತಡರಾತ್ರಿ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

46 ವರ್ಷದ ಪದ್ಮಾ ಎಂಬ ಮಹಿಳೆ ಗಂಡ ಶ್ರೀನಿವಾಸ ಹಾಗೂ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗುತ್ತಿದ್ದಳು. ಪದ್ಮಾಳ ಮೊದಲ ಮಗ ಮಂಜುನಾಥ್, ಈಗಾಗಲೇ ವಿವಾಹವಾದವನಾಗಿದ್ದರೂ, ಮತ್ತೊಬ್ಬ ಯುವತಿಯ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದ. ಇದನ್ನು ತಿಳಿದ ತಾಯಿ ಪದ್ಮಾ, ಮಗನಿಗೆ ನಿಷ್ಠುರ ಸಲಹೆ ನೀಡಲು ಮುಂದಾಗಿ, “ಮಗನೆ, ನಿನಗೆ ಹೆಂಡತಿಯಿದ್ದರೂ ಬೇರೆ ಯುವತಿಯ ಜೊತೆ ಇರುವಂತದು ತಪ್ಪು, ನೀನು ಉತ್ತಮ ವ್ಯಕ್ತಿಯಾಗಿ ಬದುಕು” ಎಂದು ಬುದ್ಧಿವಾದ ಹೇಳಲು ಯತ್ನಿಸಿದ್ದಳು.

ಆದರೆ ಈ ಮಾತು ಮಂಜುನಾಥನಿಗೆ ಅಷ್ಟೆಂದರೆ ಬೇಸರವಾಯಿತು. ತಾಯಿಯ ಮಾತಿಗೆ ಕೋಪಗೊಂಡ ಮಂಜು, ತಾಯಿ ಜೊತೆ ಜಗಳ ಆರಂಭಿಸಿದ. ಈ ವೇಳೆ ಪದ್ಮಾಳ ಗಂಡ ಶ್ರೀನಿವಾಸ ಮತ್ತು ಮತ್ತೊಬ್ಬ ಮಗ ಲಕ್ಷ್ಮಣ್ ಮಧ್ಯಪ್ರವೇಶಿಸಿ ಜಗಳ ತಡೆಯಲು ಯತ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಕೋಪಗೊಂಡ ಮಂಜುನಾಥ್ ತಮ್ಮ ಸಹೋದರ ಲಕ್ಷ್ಮಣ್ ಮೇಲೆ ಕಿಟಕಿಯ ಗಾಜು ಬಳಸಿಕೊಂಡು ಹಲ್ಲೆ ಮಾಡಲು ಮುಂದಾಗಿದ್ದ. ಈ ಕ್ಷಣದಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಜಗಳ ತಡೆಯಲು ಪದ್ಮಾ ಮುಂದಾಗಿದ್ದಾಗ, ಮಂಜುನಾಥ್ ಆಕೆಯ ಬೆನ್ನಿನ ಭಾಗಕ್ಕೆ ಗಾಜಿನಿಂದ ಇರಿದಿದ್ದಾನೆ.

ಈ ಆಕ್ರಮಣದಿಂದ ಗಂಭೀರವಾಗಿ ಗಾಯಗೊಂಡ ಪದ್ಮಾಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಪದ್ಮಾ ಮರಣ ಹೊಂದಿದಳು.

ಘಟನೆ ಬಗ್ಗೆ ಮಾಹಿತಿ ತಿಳಿದ ಕಮರಿಪೇಟೆ ಠಾಣಾ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ, ಆರೋಪಿಯಾದ ಮಂಜುನಾಥ್ ಅನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಇಡೀ ಘಟನೆಯಿಂದ ತೊರವಿ ಹಕ್ಕಲ ಪ್ರದೇಶದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ. ವರದಿ: ಶಿವು ಪಿ.ಆರ್.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago