Crime

ಮಗನ ಕ್ರೌರ್ಯಕ್ಕೆ ತಾಯಿಯ ಬಲಿ.!: ಗಾಜಿನಿಂದ ಇರಿದು ಭೀಕರ ಹತ್ಯೆ

ಹುಬ್ಬಳ್ಳಿಯ ತೊರವಿ ಹಕ್ಕಲ ಪ್ರದೇಶದಲ್ಲಿ ತಾಯಿಯೊಬ್ಬರು ತನ್ನ ಮಗನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಕಾರಣದ ಮೇಲೆ ಮಗನಿಂದಲೇ ಹತ್ಯೆಗೀಡಾದ ಭೀಕರ ಘಟನೆ ನಡೆದಿದೆ. ಈ ದುರ್ಘಟನೆ ಗುರುವಾರ ತಡರಾತ್ರಿ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

46 ವರ್ಷದ ಪದ್ಮಾ ಎಂಬ ಮಹಿಳೆ ಗಂಡ ಶ್ರೀನಿವಾಸ ಹಾಗೂ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗುತ್ತಿದ್ದಳು. ಪದ್ಮಾಳ ಮೊದಲ ಮಗ ಮಂಜುನಾಥ್, ಈಗಾಗಲೇ ವಿವಾಹವಾದವನಾಗಿದ್ದರೂ, ಮತ್ತೊಬ್ಬ ಯುವತಿಯ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದ. ಇದನ್ನು ತಿಳಿದ ತಾಯಿ ಪದ್ಮಾ, ಮಗನಿಗೆ ನಿಷ್ಠುರ ಸಲಹೆ ನೀಡಲು ಮುಂದಾಗಿ, “ಮಗನೆ, ನಿನಗೆ ಹೆಂಡತಿಯಿದ್ದರೂ ಬೇರೆ ಯುವತಿಯ ಜೊತೆ ಇರುವಂತದು ತಪ್ಪು, ನೀನು ಉತ್ತಮ ವ್ಯಕ್ತಿಯಾಗಿ ಬದುಕು” ಎಂದು ಬುದ್ಧಿವಾದ ಹೇಳಲು ಯತ್ನಿಸಿದ್ದಳು.

ಆದರೆ ಈ ಮಾತು ಮಂಜುನಾಥನಿಗೆ ಅಷ್ಟೆಂದರೆ ಬೇಸರವಾಯಿತು. ತಾಯಿಯ ಮಾತಿಗೆ ಕೋಪಗೊಂಡ ಮಂಜು, ತಾಯಿ ಜೊತೆ ಜಗಳ ಆರಂಭಿಸಿದ. ಈ ವೇಳೆ ಪದ್ಮಾಳ ಗಂಡ ಶ್ರೀನಿವಾಸ ಮತ್ತು ಮತ್ತೊಬ್ಬ ಮಗ ಲಕ್ಷ್ಮಣ್ ಮಧ್ಯಪ್ರವೇಶಿಸಿ ಜಗಳ ತಡೆಯಲು ಯತ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಕೋಪಗೊಂಡ ಮಂಜುನಾಥ್ ತಮ್ಮ ಸಹೋದರ ಲಕ್ಷ್ಮಣ್ ಮೇಲೆ ಕಿಟಕಿಯ ಗಾಜು ಬಳಸಿಕೊಂಡು ಹಲ್ಲೆ ಮಾಡಲು ಮುಂದಾಗಿದ್ದ. ಈ ಕ್ಷಣದಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಜಗಳ ತಡೆಯಲು ಪದ್ಮಾ ಮುಂದಾಗಿದ್ದಾಗ, ಮಂಜುನಾಥ್ ಆಕೆಯ ಬೆನ್ನಿನ ಭಾಗಕ್ಕೆ ಗಾಜಿನಿಂದ ಇರಿದಿದ್ದಾನೆ.

ಈ ಆಕ್ರಮಣದಿಂದ ಗಂಭೀರವಾಗಿ ಗಾಯಗೊಂಡ ಪದ್ಮಾಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಪದ್ಮಾ ಮರಣ ಹೊಂದಿದಳು.

ಘಟನೆ ಬಗ್ಗೆ ಮಾಹಿತಿ ತಿಳಿದ ಕಮರಿಪೇಟೆ ಠಾಣಾ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ, ಆರೋಪಿಯಾದ ಮಂಜುನಾಥ್ ಅನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಇಡೀ ಘಟನೆಯಿಂದ ತೊರವಿ ಹಕ್ಕಲ ಪ್ರದೇಶದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ. ವರದಿ: ಶಿವು ಪಿ.ಆರ್.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago