ಜಾರ್ಖಂಡ್ನ ಚಕ್ರಧರಪುರ ರೈಲ್ವೆ ವಿಭಾಗದಲ್ಲಿ ಮನಕಲಕುವ ಘಟನೆ ನಡೆದಿದ್ದು, ತಾಯಿಯೇ ತನ್ನ ಒಂದೂವರೆ ತಿಂಗಳ ಹಸುಗೂಸನ್ನು ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆ ಎಸೆದು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ರಾಜ್ಖರ್ಸವಾನ್ ಮತ್ತು ಮಹಲಿಮ್ರೂಪ್ ರೈಲು ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಈ ದಾರುಣ ಘಟನೆ ನಡೆದಿದ್ದು, ಮತ್ತೊಂದು ಮಗುವಿನ ಜೀವವನ್ನು ಸಹ ಪ್ರಯಾಣಿಕರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರೈಲಿನಲ್ಲಿ ಎಲ್ಲವೂ ಸಹಜವಾಗಿಯೇ ಸಾಗುತ್ತಿತ್ತು. ಆದರೆ ಏಕಾಏಕಿ ಮಹಿಳೆ ತನ್ನ ಮಡಿಲಲ್ಲಿ ಮಲಗಿದ್ದ ಒಂದೂವರೆ ತಿಂಗಳ ಹಸುಗೂಸನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ. ಈ ದೃಶ್ಯ ಕಂಡ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ತಕ್ಷಣ ಆಕೆಯನ್ನು ತಡೆಯಲು ಮುಂದಾದರು. ಇದೇ ವೇಳೆ, ತನ್ನ ಮೂರು ವರ್ಷದ ಮತ್ತೊಂದು ಮಗುವನ್ನೂ ಹೊರಗೆ ತಳ್ಳಲು ಮಹಿಳೆ ಯತ್ನಿಸಿದ್ದಾಳೆ. ಆದರೆ ಪ್ರಯಾಣಿಕರು ಆಕೆಯನ್ನು ಹಿಡಿದು ಮಗುವಿನ ಜೀವ ಉಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಳಿಗಳ ಸುತ್ತಮುತ್ತ ಶೋಧ ಕಾರ್ಯ ಆರಂಭಿಸಿದರು. ಸುಮಾರು ಒಂದು ಗಂಟೆ ಕಾಲ ನಡೆಸಿದ ತೀವ್ರ ಹುಡುಕಾಟದ ಬಳಿಕ, ಹಳಿಯ ಪಕ್ಕದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ದೃಶ್ಯ ಕಂಡ ಸ್ಥಳೀಯರು ಹಾಗೂ ಅಧಿಕಾರಿಗಳು ಕಣ್ಣೀರು ಹಾಕಿದರು.
ಬಂಧಿತ ಮಹಿಳೆಯನ್ನು ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಮಜ್ಗಾಂವ್ ನಿವಾಸಿ ಮುದ್ರಾವತಿ ಗೋಪೆ ಅಲಿಯಾಸ್ ಹಸೀನಾ ಬೇಗಂ ಎಂದು ಗುರುತಿಸಲಾಗಿದೆ. ಆಕೆಯ ಪತಿ ಪಶ್ಚಿಮ ಬಂಗಾಳ ಮೂಲದ ಶಹಾಬುದ್ದೀನ್ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ಶಹಾಬುದ್ದೀನ್ ಮುದ್ರಾವತಿಯನ್ನು ಅಪಹರಿಸಿದ್ದ ಎನ್ನಲಾಗಿದ್ದು, ಈ ಸಂಬಂಧ ಮಜ್ಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇಬ್ಬರೂ ಮದುವೆಯಾಗಿ ಹೈದರಾಬಾದ್ನಲ್ಲಿ ನೆಲೆಸಿದ್ದರು.
ಇತ್ತೀಚೆಗೆ ಕುಟುಂಬದಲ್ಲಿ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದ ಹಿನ್ನೆಲೆಯಲ್ಲಿ, ಮಕ್ಕಳೊಂದಿಗೆ ತವರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಚೈಬಾಸಾ ರೈಲ್ವೆ ನಿಲ್ದಾಣದಲ್ಲಿ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
“ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ತೀವ್ರ ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿರುವುದು ಕಂಡುಬಂದಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ” ಎಂದು ಚೈಬಾಸಾ ರೈಲ್ವೆ ಇನ್ಸ್ಪೆಕ್ಟರ್ ಪಿ.ಪಿ. ಸುರಿನ್ ತಿಳಿಸಿದ್ದಾರೆ.
ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…
ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ನ್ನು…
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಮಾನವೀಯತೆಯನ್ನೇ ಮರೆಸುವಂತಹ ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ 13…
ಸಿನಿಮಾಗಳಲ್ಲಿ ಪ್ರೀತಿಗಾಗಿ ನಾಯಕರು ದೊಡ್ಡ ದೊಡ್ಡ ಸಾಹಸ ಮಾಡುವ ದೃಶ್ಯಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಆದರೆ ನಿಜ ಜೀವನದಲ್ಲೂ ಪ್ರೀತಿಗಾಗಿ…
ಟರ್ಕಿಯಲ್ಲಿ ನಡೆದ ವಿಚಿತ್ರ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯುವಕ-ಯುವತಿಯ ವಿವಾಹವನ್ನು ಕುಟುಂಬಸ್ಥರು ಅದ್ಧೂರಿಯಾಗಿ ನೆರವೇರಿಸಿದ್ದರು.…