Categories: CrimeLatest

ರೈಲಿನಲ್ಲಿ ತಾಯಿಯೇ ರಾಕ್ಷಸಿ! ಒಂದೂವರೆ ತಿಂಗಳ ಕಂದಮ್ಮನನ್ನು ಕಿಟಕಿಯಿಂದ ಎಸೆದು ಹತ್ಯೆ

ಜಾರ್ಖಂಡ್‌ನ ಚಕ್ರಧರಪುರ ರೈಲ್ವೆ ವಿಭಾಗದಲ್ಲಿ ಮನಕಲಕುವ ಘಟನೆ ನಡೆದಿದ್ದು, ತಾಯಿಯೇ ತನ್ನ ಒಂದೂವರೆ ತಿಂಗಳ ಹಸುಗೂಸನ್ನು ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆ ಎಸೆದು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ರಾಜ್‌ಖರ್ಸವಾನ್ ಮತ್ತು ಮಹಲಿಮ್‌ರೂಪ್ ರೈಲು ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಈ ದಾರುಣ ಘಟನೆ ನಡೆದಿದ್ದು, ಮತ್ತೊಂದು ಮಗುವಿನ ಜೀವವನ್ನು ಸಹ ಪ್ರಯಾಣಿಕರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರೈಲಿನಲ್ಲಿ ಎಲ್ಲವೂ ಸಹಜವಾಗಿಯೇ ಸಾಗುತ್ತಿತ್ತು. ಆದರೆ ಏಕಾಏಕಿ ಮಹಿಳೆ ತನ್ನ ಮಡಿಲಲ್ಲಿ ಮಲಗಿದ್ದ ಒಂದೂವರೆ ತಿಂಗಳ ಹಸುಗೂಸನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ. ಈ ದೃಶ್ಯ ಕಂಡ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ತಕ್ಷಣ ಆಕೆಯನ್ನು ತಡೆಯಲು ಮುಂದಾದರು. ಇದೇ ವೇಳೆ, ತನ್ನ ಮೂರು ವರ್ಷದ ಮತ್ತೊಂದು ಮಗುವನ್ನೂ ಹೊರಗೆ ತಳ್ಳಲು ಮಹಿಳೆ ಯತ್ನಿಸಿದ್ದಾಳೆ. ಆದರೆ ಪ್ರಯಾಣಿಕರು ಆಕೆಯನ್ನು ಹಿಡಿದು ಮಗುವಿನ ಜೀವ ಉಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಳಿಗಳ ಸುತ್ತಮುತ್ತ ಶೋಧ ಕಾರ್ಯ ಆರಂಭಿಸಿದರು. ಸುಮಾರು ಒಂದು ಗಂಟೆ ಕಾಲ ನಡೆಸಿದ ತೀವ್ರ ಹುಡುಕಾಟದ ಬಳಿಕ, ಹಳಿಯ ಪಕ್ಕದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ದೃಶ್ಯ ಕಂಡ ಸ್ಥಳೀಯರು ಹಾಗೂ ಅಧಿಕಾರಿಗಳು ಕಣ್ಣೀರು ಹಾಕಿದರು.

ಬಂಧಿತ ಮಹಿಳೆಯನ್ನು ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಮಜ್‌ಗಾಂವ್ ನಿವಾಸಿ ಮುದ್ರಾವತಿ ಗೋಪೆ ಅಲಿಯಾಸ್ ಹಸೀನಾ ಬೇಗಂ ಎಂದು ಗುರುತಿಸಲಾಗಿದೆ. ಆಕೆಯ ಪತಿ ಪಶ್ಚಿಮ ಬಂಗಾಳ ಮೂಲದ ಶಹಾಬುದ್ದೀನ್ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ಶಹಾಬುದ್ದೀನ್ ಮುದ್ರಾವತಿಯನ್ನು ಅಪಹರಿಸಿದ್ದ ಎನ್ನಲಾಗಿದ್ದು, ಈ ಸಂಬಂಧ ಮಜ್‌ಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇಬ್ಬರೂ ಮದುವೆಯಾಗಿ ಹೈದರಾಬಾದ್‌ನಲ್ಲಿ ನೆಲೆಸಿದ್ದರು.

ಇತ್ತೀಚೆಗೆ ಕುಟುಂಬದಲ್ಲಿ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದ ಹಿನ್ನೆಲೆಯಲ್ಲಿ, ಮಕ್ಕಳೊಂದಿಗೆ ತವರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಚೈಬಾಸಾ ರೈಲ್ವೆ ನಿಲ್ದಾಣದಲ್ಲಿ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ತೀವ್ರ ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿರುವುದು ಕಂಡುಬಂದಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ” ಎಂದು ಚೈಬಾಸಾ ರೈಲ್ವೆ ಇನ್ಸ್‌ಪೆಕ್ಟರ್ ಪಿ.ಪಿ. ಸುರಿನ್ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಪುಸ್ತಕ ಲೋಕಾರ್ಪಣೆ: ಲೀಲಾವತಿ–ರಾಜ್‌ಕುಮಾರ್‌ ಕುರಿತ ವಿವಾದಗಳಿಗೆ ದಾಖಲೆಗಳ ಸಮೇತ ಉತ್ತರ ಎಂದ ಎನ್‌.ಆರ್‌. ರಮೇಶ್

ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್‌ ಅವರ ಹಿನ್ನೆಲೆ ಹಾಗೂ ಈ…

6 hours ago

‘ನಾನು ಪೋಸ್ಟ್ ಡಿಲೀಟ್ ಮಾಡುವುದಿಲ್ಲ’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸಂಸದೆ ಪುತ್ರಿಯ ಬಹಿರಂಗ ಸವಾಲ್

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ…

6 hours ago

ತುಮಕೂರಿನಲ್ಲಿ ಭೀಕರ ಹತ್ಯೆ: ರೌಡಿಶೀಟರ್ ಮಲ್ಲನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ…

6 hours ago

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

1 day ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

1 day ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

1 day ago