Latest

ಹಣಕ್ಕಾಗಿ ತಾಯಿಯ ಹತ್ಯೆ: ಬಾಗಲಕುಂಟೆಯಲ್ಲಿ ಪಾಪಿ ಮಗನ ಕ್ರೂರತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಾಗಲಕುಂಟೆ ಹತ್ತಿರದ ಮುನೇಶ್ವರನಗರದಲ್ಲಿ ತಡರಾತ್ರಿ ನಡೆದಿರುವ ಭೀಕರ ಕೊಲೆ ಪ್ರಕರಣ ಸ್ಥಳೀಯರಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿದೆ. ಹಣದ ತಾಯಿಯ ಪ್ರಾಣ ಕಿತ್ತುಕೊಂಡ ಮನುಷ್ಯತ್ವ ಮರೆತ ಮಗನ ಕ್ರೂರತೆಯು ಬೆಳಕಿಗೆ ಬಂದಿದೆ.

ತಾಯಿಯ ಮೇಲೆ ಹತ್ಯೆ ಕೃತ್ಯ ಎಸಗಿದ ಆರೋಪಿ ಮಹೇಂದ್ರ ಸಿಂಗ್‌ ಎಂಬ ವ್ಯಕ್ತಿ, ತನ್ನ ತಾಯಿ ಶಾಂತಾಬಾಯಿ ಅವರನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಬಲವಾಗಿ ಹೊಡೆದು ಕೊಂದಿದ್ದಾನೆ. ಈ ಘಟನೆ ಮಂಗಳವಾರ ತಡರಾತ್ರಿಯಲ್ಲಿ ನಡೆದಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಮಹೇಂದ್ರ ತನ್ನ ತಾಯಿಯನ್ನು ಪ್ರತಿ ದಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ. ನಿನ್ನೆ ರಾತ್ರಿ ಕೂಡಾ ಹಣದ ವಿಚಾರವಾಗಿ ತೀವ್ರ ವಾಗ್ವಾದ ನಡೆಯಿದ್ದು, ಜಗಳದ ವೇಳೆ ಕೋಪದ ಮೇಲೆ ಮಹೇಂದ್ರ ರಾಡ್ ಎತ್ತಿ ತಲೆಗೆ ಹೊಡೆದಿದ್ದಾನೆ. ತೀವ್ರ ಗಾಯಗಳಿಂದ ಶಾಂತಾಬಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆ ನಂತರ ಆರೋಪಿ ಮಹೇಂದ್ರ ಸಿಂಗ್ ಸ್ಥಳದಿಂದ ಪರಾರಿಯಾಗಿದ್ದು, ಇದೀಗ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಈ ಪ್ರಕರಣ ಮತ್ತೊಮ್ಮೆ ಕುಟುಂಬದೊಳಗಿನ ಮಾನಸಿಕ ಒತ್ತಡ, ಆರ್ಥಿಕ ಬಿಕ್ಕಟ್ಟುಗಳು ಹೇಗೆ ದುರಂತಕ್ಕೆ ಕಾರಣವಾಗುತ್ತವೆ ಎಂಬುದಕ್ಕೆ ದಾರಿ ತೋರಿಸಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

3 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

3 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

3 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

23 hours ago