ದೇಶದಲ್ಲಿ ದಿನೇದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಸಮಾಜದಲ್ಲಿ ಆತಂಕವನ್ನುಂಟು ಮಾಡುತ್ತಿವೆ. ಮಕ್ಕಳು, ಹದಿಹರೆಯದವರು, ಮಹಿಳೆಯರು ಮಾತ್ರವಲ್ಲದೇ ವೃದ್ಧೆಯರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಹಲವಾರು ಪ್ರಕರಣಗಳಲ್ಲಿ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಹಾಗೂ ನ್ಯಾಯ ವ್ಯವಸ್ಥೆಯ ನಿಧಾನಗತಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
2022ರ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ಪ್ರಕಾರ, ದೇಶದಲ್ಲಿ ಪ್ರತಿದಿನ ಸರಾಸರಿ 90 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರವೂ ದಿನಕ್ಕೆ 86ರಿಂದ 89 ಪ್ರಕರಣಗಳು ವರದಿಯಾಗುತ್ತಿದ್ದು, ಅಂದಾಜು ಪ್ರತಿ 17 ನಿಮಿಷಕ್ಕೊಮ್ಮೆ ಒಂದು ದೌರ್ಜನ್ಯ ಸಂಭವಿಸುತ್ತಿದೆ. ಇನ್ನೂ ಅನೇಕ ಪ್ರಕರಣಗಳು ವರದಿಯಾಗದೇ ಉಳಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
ಈ ನಡುವೆ Brazilನಲ್ಲಿ ನಡೆದ ಒಂದು ಪ್ರಕರಣ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2025ರ ಮಾರ್ಚ್ನಲ್ಲಿ ನಡೆದ ಈ ಘಟನೆದಲ್ಲಿ, ಎರಿಕಾ ಪೆರೇರಾ ಡ ಸಿಲ್ವೇರಾ ವಿಸೆಂಟೆ ಎಂಬ ಮಹಿಳೆ ತನ್ನ 11 ವರ್ಷದ ಮಗಳನ್ನು ರಕ್ಷಿಸಲು ಆಕೆಯ ಮೇಲೆ ದೌರ್ಜನ್ಯ ಎಸಗಲು ಯತ್ನಿಸಿದ್ದ ವ್ಯಕ್ತಿಯನ್ನು ಕೊಂದಿದ್ದಾಳೆ.
ಘಟನೆ ನಡೆದ ವೇಳೆ, Belo Horizonteಯಲ್ಲಿರುವ ತಮ್ಮ ಮನೆಯಲ್ಲಿ ಮಗಳ ಕಿರುಚಾಟ ಕೇಳಿದ ತಾಯಿ ಕೋಣೆಗೆ ಧಾವಿಸಿದಾಗ, ತನ್ನ ಗೆಳೆಯ ಎವರ್ಟನ್ ಅಮರೊ ಡ ಸಿಲ್ವಾ ಮಗಳ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಂಡಿದ್ದಾಳೆ. ಇದಕ್ಕೂ ಮುನ್ನ ಆತನಿಂದ ಮಗಳಿಗೆ ಅಸಭ್ಯ ಸಂದೇಶಗಳು ಬಂದಿದ್ದವು ಎಂಬುದೂ ತಿಳಿದುಬಂದಿದೆ.
ಮಗಳ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಎರಿಕಾ ಆತನಿಗೆ ಅಮಲು ಪದಾರ್ಥ ನೀಡಿ, ಬಳಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ. ನಂತರ ಘಟನೆ ಬಗ್ಗೆ ಪೊಲೀಸರಿಗೆ ಶರಣಾಗಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.
ಪ್ರಕರಣದಲ್ಲಿ ಸರ್ಕಾರಿ ವಕೀಲರು ಪೂರ್ವಯೋಜಿತ ಕೊಲೆ ಎಂದು ವಾದಿಸಿದರೆ, ಪ್ರತಿವಾದಿಗಳು ಇದು ಕಾನೂನುಬದ್ಧ ಆತ್ಮರಕ್ಷಣೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಮಾರ್ಚ್ 24ರಂದು ಎರಿಕಾಳನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.
ಈ ತೀರ್ಪು ಸಮಾಜದಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಕೆಲವರು ಆಕೆಯನ್ನು “ಹೀರೋ” ಎಂದು ಕೊಂಡಾಡಿದರೆ, ಇನ್ನೂ ಕೆಲವರು ನ್ಯಾಯ ವ್ಯವಸ್ಥೆಯ ಮಾನದಂಡಗಳ ಬಗ್ಗೆ ಪ್ರಶ್ನೆ ಎಬ್ಬಿಸಿದ್ದಾರೆ. ಪ್ರಾಸಿಕ್ಯೂಷನ್ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…