Categories: CrimeLatestWorld

ಮಗಳ ಮೇಲೆ ಅತ್ಯಾಚಾರವೆಸಗಿದವನನ್ನು ಕೊಂದ ತಾಯಿ: ವಿವಾದಕ್ಕೆ ಕಾರಣವಾಯಿತು ನ್ಯಾಯಾಲಯದ ತೀರ್ಪು

ದೇಶದಲ್ಲಿ ದಿನೇದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಸಮಾಜದಲ್ಲಿ ಆತಂಕವನ್ನುಂಟು ಮಾಡುತ್ತಿವೆ. ಮಕ್ಕಳು, ಹದಿಹರೆಯದವರು, ಮಹಿಳೆಯರು ಮಾತ್ರವಲ್ಲದೇ ವೃದ್ಧೆಯರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಹಲವಾರು ಪ್ರಕರಣಗಳಲ್ಲಿ ಆರೋಪಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವುದು ಹಾಗೂ ನ್ಯಾಯ ವ್ಯವಸ್ಥೆಯ ನಿಧಾನಗತಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

2022ರ ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ ವರದಿ ಪ್ರಕಾರ, ದೇಶದಲ್ಲಿ ಪ್ರತಿದಿನ ಸರಾಸರಿ 90 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರವೂ ದಿನಕ್ಕೆ 86ರಿಂದ 89 ಪ್ರಕರಣಗಳು ವರದಿಯಾಗುತ್ತಿದ್ದು, ಅಂದಾಜು ಪ್ರತಿ 17 ನಿಮಿಷಕ್ಕೊಮ್ಮೆ ಒಂದು ದೌರ್ಜನ್ಯ ಸಂಭವಿಸುತ್ತಿದೆ. ಇನ್ನೂ ಅನೇಕ ಪ್ರಕರಣಗಳು ವರದಿಯಾಗದೇ ಉಳಿಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಈ ನಡುವೆ Brazilನಲ್ಲಿ ನಡೆದ ಒಂದು ಪ್ರಕರಣ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. 2025ರ ಮಾರ್ಚ್‌ನಲ್ಲಿ ನಡೆದ ಈ ಘಟನೆದಲ್ಲಿ, ಎರಿಕಾ ಪೆರೇರಾ ಡ ಸಿಲ್ವೇರಾ ವಿಸೆಂಟೆ ಎಂಬ ಮಹಿಳೆ ತನ್ನ 11 ವರ್ಷದ ಮಗಳನ್ನು ರಕ್ಷಿಸಲು ಆಕೆಯ ಮೇಲೆ ದೌರ್ಜನ್ಯ ಎಸಗಲು ಯತ್ನಿಸಿದ್ದ ವ್ಯಕ್ತಿಯನ್ನು ಕೊಂದಿದ್ದಾಳೆ.

ಘಟನೆ ನಡೆದ ವೇಳೆ, Belo Horizonteಯಲ್ಲಿರುವ ತಮ್ಮ ಮನೆಯಲ್ಲಿ ಮಗಳ ಕಿರುಚಾಟ ಕೇಳಿದ ತಾಯಿ ಕೋಣೆಗೆ ಧಾವಿಸಿದಾಗ, ತನ್ನ ಗೆಳೆಯ ಎವರ್ಟನ್ ಅಮರೊ ಡ ಸಿಲ್ವಾ ಮಗಳ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಕಂಡಿದ್ದಾಳೆ. ಇದಕ್ಕೂ ಮುನ್ನ ಆತನಿಂದ ಮಗಳಿಗೆ ಅಸಭ್ಯ ಸಂದೇಶಗಳು ಬಂದಿದ್ದವು ಎಂಬುದೂ ತಿಳಿದುಬಂದಿದೆ.

ಮಗಳ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಎರಿಕಾ ಆತನಿಗೆ ಅಮಲು ಪದಾರ್ಥ ನೀಡಿ, ಬಳಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ. ನಂತರ ಘಟನೆ ಬಗ್ಗೆ ಪೊಲೀಸರಿಗೆ ಶರಣಾಗಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

ಪ್ರಕರಣದಲ್ಲಿ ಸರ್ಕಾರಿ ವಕೀಲರು ಪೂರ್ವಯೋಜಿತ ಕೊಲೆ ಎಂದು ವಾದಿಸಿದರೆ, ಪ್ರತಿವಾದಿಗಳು ಇದು ಕಾನೂನುಬದ್ಧ ಆತ್ಮರಕ್ಷಣೆ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಮಾರ್ಚ್ 24ರಂದು ಎರಿಕಾಳನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ.

ಈ ತೀರ್ಪು ಸಮಾಜದಲ್ಲಿ ಮಿಶ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಕೆಲವರು ಆಕೆಯನ್ನು “ಹೀರೋ” ಎಂದು ಕೊಂಡಾಡಿದರೆ, ಇನ್ನೂ ಕೆಲವರು ನ್ಯಾಯ ವ್ಯವಸ್ಥೆಯ ಮಾನದಂಡಗಳ ಬಗ್ಗೆ ಪ್ರಶ್ನೆ ಎಬ್ಬಿಸಿದ್ದಾರೆ. ಪ್ರಾಸಿಕ್ಯೂಷನ್ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago