Categories: CrimeLatest

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ ಮಗನೊಬ್ಬ ತನ್ನದೇ ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ತನ್ನಿಕುನ್ನು ನಿವಾಸಿಯಾದ ಗೀತಮ್ಮ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರು. ಅವರ ಮಗ ಕ್ರಿಸ್ಟಿ ಬೆಂಗಳೂರಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದನು. ಆದರೆ ಮಾದಕ ವ್ಯಸನದ ಚಟದಿಂದ ಓದನ್ನು ಅರ್ಧದಲ್ಲೇ ನಿಲ್ಲಿಸಿ, ಸುಮಾರು ಒಂದು ವಾರದ ಹಿಂದೆ ಊರಿಗೆ ವಾಪಸ್ಸಾಗಿದ್ದನು.

ಶುಕ್ರವಾರ ರಾತ್ರಿ ಸುಮಾರು 10 ಗಂಟೆಯ ವೇಳೆ ತಾಯಿ-ಮಗನ ನಡುವೆ ಗಂಭೀರ ವಾಗ್ವಾದ ಉಂಟಾಗಿದೆ. ವಾಗ್ವಾದ ತೀವ್ರಗೊಂಡಾಗ ಕೋಪೋದ್ರಿಕ್ತನಾದ ಕ್ರಿಸ್ಟಿ, ತಾಯಿಯ ಮಲಗುವ ಕೋಣೆಯಲ್ಲೇ ಚಾಕುವಿನಿಂದ ಕುತ್ತಿಗೆಗೆ ಇರಿದು ಹತ್ಯೆಗೈದಿದ್ದಾನೆ.

ಗೀತಮ್ಮ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಅವರ ಅಜ್ಜಿ ಆಘಾತದಿಂದ ಕಿರುಚಾಡಿದ್ದಾರೆ. ಘಟನೆ ಬಳಿಕ ಕ್ರಿಸ್ಟಿ ನೆರೆಹೊರೆಯವರ ಸ್ಕೂಟರ್‌ನಲ್ಲಿ ಕೇಳಕಂ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಮೃತ ಗೀತಮ್ಮ ಸಮಾಜ ಸೇವಕಿಯಾಗಿದ್ದು, ಮಹಿಳಾ ಮೋರ್ಚಾ ಜಿಲ್ಲಾ ಸಮಿತಿಯ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜೊತೆಗೆ ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ಅಂಗಡಿಯನ್ನು ನಡೆಸುತ್ತಿದ್ದರು.

ಮಾದಕ ವ್ಯಸನ ಮತ್ತು ಕುಟುಂಬದ ಒಳಗಿನ ಕಲಹವೇ ಈ ಭೀಕರ ಹತ್ಯೆಗೆ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

16 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

16 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

16 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

16 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

16 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

16 hours ago