Categories: CrimeLatest

ಹಣದಾಸೆಗೆ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ತಾಯಿ; ಗಿರಾಕಿಗಳ ಬಳಿ ಬಿಟ್ಟು ಬರುತ್ತಿದ್ದ ಮಲತಂದೆ:- ಮೂವರ ಬಂಧನ

ಬೆಂಗಳೂರು: ಹಣದಾಸೆಗೆ ಒಳಗಾಗಿ ತನ್ನದೇ 15 ವರ್ಷದ ಮಗಳನ್ನು ಮಾಂಸದಂಧೆಗೆ ತಳ್ಳಿದ ತಾಯಿಯ ಅಮಾನವೀಯ ಕೃತ್ಯವನ್ನು ಚಂದ್ರಾಲೇಔಟ್ ಪೊಲೀಸ್ ಠಾಣೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಸಂಬಂಧ ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನಿಖೆ ವೇಳೆ ಹೊರಬಂದ ಮಾಹಿತಿಯ ಪ್ರಕಾರ, ಬಾಲಕಿಯ ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಆಕೆಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಅಲ್ಲಿ ಬಾಲಕಿ ದಿನಪೂರ್ತಿ ಅನ್ಯ ವ್ಯಕ್ತಿಗಳ ಕಿರುಕುಳಕ್ಕೆ ಒಳಗಾಗುತ್ತಿದ್ದಳು ಎಂದು ತಿಳಿದುಬಂದಿದೆ.
ಮಧ್ಯವರ್ತಿಯು ಬಾಲಕಿಯೊಂದಿಗೆ ಸಮಯ ಕಳೆಯಲು ಗಿರಾಕಿಗಳಿಂದ ₹6 ಸಾವಿರದಿಂದ ₹10 ಸಾವಿರವರೆಗೆ ಹಣ ವಸೂಲು ಮಾಡುತ್ತಿದ್ದಳು. ಆ ಹಣದಲ್ಲಿ ಅರ್ಧದಷ್ಟು ಮೊತ್ತವನ್ನು ಬಾಲಕಿಯ ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಪ್ರಕರಣ ಬೆಳಕಿಗೆ ಬಂದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಬಾಲಕಿಯ ತಾಯಿ, ಮಲತಂದೆ ಮತ್ತು ಮಧ್ಯವರ್ತಿಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಕೃತ್ಯದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆ ಇರುವುದಾಗಿ ಶಂಕಿಸಲಾಗಿದ್ದು, ಸಂಬಂಧಪಟ್ಟವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago