ಧಾರವಾಡ, ಜುಲೈ 7 – ಹೃದಯಾಘಾತದಿಂದ 56 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಯಾದವಾಡ ಗ್ರಾಮದಿಂದ ವರದಿಯಾಗಿದೆ. ಮೃತ ಮಹಿಳೆಯನ್ನು ಶಾಂತವ್ವ ತೋಟಗೇರಿ ಎಂದು ಗುರುತಿಸಲಾಗಿದೆ.

ಘಟನೆ ನಡೆದಿದ್ದು ಹೀಗಾಗಿದೆ – ಕಳೆದ ಭಾನುವಾರ ಶಾಂತವ್ವ ತೋಟಗೇರಿ ಅವರು ತಮ್ಮ ಮಗಳನ್ನು ಗಂಡನ ಮನೆಯಿಂದ ಕರೆತರಲು ಧಾರವಾಡದ ಹೆಬ್ಬಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಕುಟುಂಬದವರು ಅವರನ್ನು ಹುಬ್ಬಳ್ಳಿಯ ಖ್ಯಾತ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿದರು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಾಂತವ್ವ ದುರಂತವಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಿಂದ ಕುಟುಂಬದಲ್ಲಿ ದುಃಖದ ಛಾಯೆ ಮೂಡಿದ್ದು, ಶಾಂತವ್ವರ ನಿಧನ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದೆ.

ವರದಿ: ಶಿವು ಪಿ.ಆರ್.

error: Content is protected !!