ನೆಲಮಂಗಲ, ಜುಲೈ 07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ನಾಗಕಲ್ಲು ಗ್ರಾಮದಲ್ಲಿ ಇಡೀ ಸಮಾಜವನ್ನು ಅಚ್ಚರಿಗೊಳಿಸುವಂತಹ ಮನುಷ್ಯತ್ವ ಮರೆತ ಘಟನೆ ಬೆಳಕಿಗೆ ಬಂದಿದೆ. ಕೇವಲ 45 ದಿನದ ಗಂಡು ಶಿಶುವನ್ನು ಹೆತ್ತ ತಾಯಿಯೇ ಹತ್ಯೆ ಮಾಡಿದ ದಾರುಣ ಘಟನೆ ಇದು.
ಸ್ಥಳೀಯರ ಪ್ರಕಾರ, ಆರೋಪಿಯಾಗಿರುವ ರಾಧೆ ಎಂಬ ಮಹಿಳೆ ಪತಿ ಪವನ್ನೊಂದಿಗೆ ನಾಗಕಲ್ಲು ಗ್ರಾಮದಲ್ಲಿ ವಾಸವಾಗಿದ್ದಳು. ಪವನ್ ಮೂಲತಃ ದೈನಂದಿನ ಕೂಲಿ ಕೆಲಸದಲ್ಲಿ ನಿರತರಾಗಿದ್ದರೂ, ಕೆಲಸ ಇಲ್ಲದೆ ಕುಡಿತದ ಅಡ್ಡಪಂಥೆಗೆ ಬಿದ್ದಿದ್ದ. ಕುಟುಂಬದ ಆರ್ಥಿಕ ಸ್ಥಿತಿ ದಿನೇದಿನಕ್ಕೂ ಹದಗೆಡುತ್ತಿದ್ದಂತೆಯೇ, ಮಗುವಿನ ಆರೈಕೆ ಮಾಡುವುದು ರಾಧೆಗೆ ಕಠಿಣವಾಗಿತ್ತಂತೆ.
ಘಟನೆ ನಡೆದ ದಿನ ತಡರಾತ್ರಿ, ಮಾನಸಿಕ ಒತ್ತಡಕ್ಕೆ ಒಳಗಾದ ರಾಧೆ ತನ್ನ 45 ದಿನದ ಮಗುವನ್ನು ನೀರು ಕಾಯಿಸುತ್ತಿದ್ದ ಹಂಡೆಯೊಳಗೆ ಇಟ್ಟು ಮುಳುಗಿಸಿ ಹತ್ಯೆಗೈದಿದ್ದಾಳೆ ಎಂಬ ಶಂಕೆ ಉಂಟಾಗಿದೆ. ಈ ವಿಚಾರ ತಿಳಿದ ಸ್ಥಳೀಯರು ಶಾಕ್ಗೆ ಒಳಗಾಗಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ನೆಲಮಂಗಲ ಟೌನ್ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಾಧೆಯನ್ನು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ಮಗುವಿನ ಮೃತದೇಹವನ್ನು ಪೋಸ್ಟ್ಮಾರ್ಟಂಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ತಾಯಿ ರಾಧೆಯ ನಿಜವಾದ ಉದ್ದೇಶ ಏನು, ಅವಳು ಮನಃಸ್ಥಿತಿಯ ಬಲಿಗೆ ಬಿದ್ದಳಾ ಅಥವಾ ಯಾವುದೇ ಇನ್ನಷ್ಟು ವಿಚಾರಗಳು ಇದರಲ್ಲಿ ಇವೆ ಎಂಬುದನ್ನು ತನಿಖೆ ಬಹಿರಂಗಪಡಿಸಬೇಕಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…