Latest

ಮುಡಾ ಭೂಮಿ ಕೇಸ್: ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ.

ಮೂಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಎನ್.ಡೀ. (ಜಾರಿ ನಿರ್ದೇಶನಾಲಯ) ಅವರು ಅಕ್ರಮ ಹಣ ವರ್ಗಾವಣೆಯ ಯತ್ನದಲ್ಲಿ ಭಾಗಿಯಾಗಿದ್ದಾರೆಂದು ಹೇಳಿರುವಂತೆ ಬಹಿರಂಗಗೊಂಡಿದೆ. ಇ.ಡಿ. ಅವರ ತಾತ್ಕಾಲಿಕ ಸ್ಥಿರಾಸ್ತಿ ಜಪ್ತಿ ಆದೇಶದಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.

ಮುಡಾ  ಜಮೀನನ್ನು ರೂ. 3,24,700 ರಲ್ಲಿ ಸ್ವಾಧೀನಪಡಿಸಿಕೊಂಡಿತ್ತು. ಆದರೂ, ಈ ಜಮೀನನ್ನು ಕಾನೂನುಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿ, ರಾಜಕೀಯ ಪ್ರಭಾವ ಬಳಸಿ ಭೂಮಿಯ ಪರಿವರ್ತನೆಗೆ ಕಾರಣವಾಗುವಂತಾ ತಪ್ಪು ಮಾಹಿತಿ ಆಧರಿಸಿದ ವರದಿ ತಯಾರಿಸಿಕೊಳ್ಳಲಾಗಿದೆ ಎಂದು ಇ.ಡಿ. ಹೇಳಿದೆ. ಈ ಪ್ರಕ್ರಿಯೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರ ಸಹೋದ್ಯೋಗಿ ಬಿ.ಎಂ. ಮಲ್ಲಿಕಾರ್ಜುನಸ್ವಾಮಿ ಈ ಜಮೀನನ್ನು ಕೃಷಿ ಜಮೀನು ಎಂದು ಖರೀದಿಸಿದ್ದಾರೆ.

ಈ ವೇಳೆ, ಮುಡಾ ಇದನ್ನು ಬಡವಣಿಗೆ ಮೂಲಕ ಅಭಿವೃದ್ಧಿಪಡಿಸಿ, ನಿವೇಶನಗಳನ್ನು ಹಂಚಿಕೆಗೆ ಮುಂದಾಗಿದೆ. ಆದರೆ, ಇದರಲ್ಲಿ ಯಾವುದೇ ಕಾನೂನು ತಕರಾರು ಉದ್ಭವಿಸಿರಲಿಲ್ಲ. ನಂತರ, ಪ್ರಭಾವ ಪಡಿಸುವ ಮುಖಾಂತರ, ಮುಡಾ ಈ ನವೀನ ನಿವೇಶನಗಳನ್ನು 56 ಕೋಟಿಯಷ್ಟೆ ಬೆಲೆಯುಳ್ಳ ಸೈಟ್ ಗಳನ್ನು ಪರಿಹಾರವಾಗಿ ಪಡೆದಿದೆ ಎಂದು ಇ.ಡಿ. ಅಭಿಪ್ರಾಯಪಟ್ಟಿದೆ.

ಇ.ಡಿ.ಯ ಆದೇಶವು ಹೇಳಿದಂತೆ, ಮುಡಾ ಯೋಜನೆಯಲ್ಲಿ ಪಾಲ್ಗೊಂಡಂತೆ, ಈ ಪ್ರಕ್ರಿಯೆಯಲ್ಲಿ ಹಿಂದೆ ಮುಡಾ ಆಯುಕ್ತರಾಗಿದ್ದ ನಟೇಶ್ ಅವರು ಶಾಮೀಲಾಗಿದ್ದರು. ಪಿಎಂಎಲ್ಏ ಅಡಿ ತನಿಖೆ ಆರಂಭಿಸಿದ ನಂತರ, ಸಿಎಂ ಅವರ ಪತ್ನಿ ಬಿ.ಎಂ. ಪಾರ್ವತಿ ಅವರು 2024 ಅಕ್ಟೋಬರ್ 1 ರಂದು ಮುಡಾಗೆ 14 ನಿವೇಶನಗಳನ್ನು ಹಿಂದಿರುಗಿಸಿದರೂ, ಅಕ್ರಮ ಹಣ ವರ್ಗಾವಣೆಯ ಪ್ರಯತ್ನಗಳು ಸಾಗಿದವು ಎಂದು ಮುಂದುವರೆದ ವಿಚಾರಣೆ ಹೇಳುತ್ತಿದೆ.

ಇ.ಡಿ. ಅವರ ತಾತ್ಕಾಲಿಕ ಜಪ್ತಿ ಆದೇಶದಲ್ಲಿ, ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನಸ್ವಾಮಿ, ದೇವರಾಜು ಮತ್ತು ಮುಡಾ ಅಧಿಕಾರಿಗಳ ಜೊತೆಗೆ ವ್ಯವಹಾರಸ್ಥರು ಹಾಗೂ ಪ್ರಭಾವಿಗಳೂ ಈ ಅಕ್ರಮ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

11 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago