ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು ಕೆಸರೂ ಗೆದ್ದೆಯಾಗಿ ಪಾದಾಚಾರಗಳಿಗೆ ಒಡಾಡಲು ಸಮರ್ಪಕ ರಸ್ತೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.
ಈ ರಸ್ತೆಯ ವಿಷಯ ಇಂದು ನಿನ್ನೆಯದಲ್ಲ ಸುಮಾರು 25 ವರ್ಷಗಳಿಂದಲೂ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ ಚಾಲಕನಗಿರಬೇಕು ಇಲ್ಲದಿದ್ದರೆ ಈ ರಸ್ತೆ ರಾಕ್ಷಸನಂತೆ ಬಾಯಿ ತೆಗೆದು ವಾಹನ ಮತ್ತು ಚಾಲಕ ಇಬ್ಬರನ್ನು ತನ್ನತ್ತ ಸೆಳೆದುಕೊಂಡು ಬಿಡುತ್ತದೆ.
ಪ್ರತಿ ವರ್ಷ ಕಾಟಾಚಾರಕ್ಕೆಂಬುವಂತೆ ನಾಲ್ಕಾರು ಟ್ರಿಪ್ ಮಣ್ಣು ಹಾಕಿಸಿ ಕೈತೂಳೆದುಕೂಳ್ಳುತ್ತಿದ ಪಂಚಾಯತಿ ಈ ಬಾರಿ ಕೂಡ ಅದೆ ಮೂಹರಂ ಮಣ್ಣು ಹಾಕಿ ಕೈತೊಳೆದುಕೊಳ್ಳುವ ಕೆಲಸ ಮಾಡಿದ್ದಾರೆ. ಆದರೆ ಇವರು ಮಾಡಿದ ಈ ಕೆಲಸದಿಂದ ರಸ್ತೆ ಮತ್ತಷ್ಟು ಹಾಳಾಗಿದೆ. ಈ ರಸ್ತೆಯ ಬದಿಯಲ್ಲಿ ಚರಂಡಿಗಳಿಲ್ಲದ ಕಾರಣ. ಮಳೆಗಾಲ ಮುಗಿಯುವಷ್ಟರಲ್ಲಿ ಕೊಳಚೆ ನೀರು ಸಹ ರಸ್ತೆಗೆ ಬಂದು ನಿಂತು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಎಲ್ಲಾ ಸರಿಯಾಗಿದ್ದರು ಸಹ ಜನರು ರೋಗಗಳಿಗೆ ತುತ್ತಾಗುತ್ತಾರೆ ಅಂದಮೇಲೆ ಈ ರಸ್ತೆಯಲ್ಲಿ ಓಡಾಡುವ ಜನರು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಹೇಳಿ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮಳೆಗಾಲದಲ್ಲಿ ಬಂದು ಬರೀ ಮಣ್ಣನ್ನು ಹಾಕಿಸುವುದು ಮಾತ್ರವಲ್ಲದೆ ಸರಿಯಾದ ರೀತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.
ವರದಿ: ಶಾನು ಯಲಿಗಾರ
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…