Latest

ಕೆಸರು ಗದ್ದೆಯಾದ ರಸ್ತೆ; ಜನರು ನಾಟಿ ಮಾಡಲೆಂದು ಕಾಯುತ್ತಿದ್ದಾರಾ ಅಧಿಕಾರಿಗಳು?

ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು ಕೆಸರೂ ಗೆದ್ದೆಯಾಗಿ ಪಾದಾಚಾರಗಳಿಗೆ ಒಡಾಡಲು ಸಮರ್ಪಕ ರಸ್ತೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಈ ರಸ್ತೆಯ ವಿಷಯ ಇಂದು ನಿನ್ನೆಯದಲ್ಲ ಸುಮಾರು 25 ವರ್ಷಗಳಿಂದಲೂ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ ಚಾಲಕನಗಿರಬೇಕು ಇಲ್ಲದಿದ್ದರೆ ಈ ರಸ್ತೆ ರಾಕ್ಷಸನಂತೆ ಬಾಯಿ ತೆಗೆದು ವಾಹನ ಮತ್ತು ಚಾಲಕ ಇಬ್ಬರನ್ನು ತನ್ನತ್ತ ಸೆಳೆದುಕೊಂಡು ಬಿಡುತ್ತದೆ.

ಪ್ರತಿ ವರ್ಷ ಕಾಟಾಚಾರಕ್ಕೆಂಬುವಂತೆ ನಾಲ್ಕಾರು ಟ್ರಿಪ್ ಮಣ್ಣು ಹಾಕಿಸಿ ಕೈತೂಳೆದುಕೂಳ್ಳುತ್ತಿದ ಪಂಚಾಯತಿ ಈ ಬಾರಿ ಕೂಡ ಅದೆ ಮೂಹರಂ ಮಣ್ಣು ಹಾಕಿ ಕೈತೊಳೆದುಕೊಳ್ಳುವ ಕೆಲಸ ಮಾಡಿದ್ದಾರೆ. ಆದರೆ ಇವರು ಮಾಡಿದ ಈ ಕೆಲಸದಿಂದ ರಸ್ತೆ ಮತ್ತಷ್ಟು ಹಾಳಾಗಿದೆ. ಈ ರಸ್ತೆಯ ಬದಿಯಲ್ಲಿ ಚರಂಡಿಗಳಿಲ್ಲದ ಕಾರಣ. ಮಳೆಗಾಲ ಮುಗಿಯುವಷ್ಟರಲ್ಲಿ ಕೊಳಚೆ ನೀರು ಸಹ ರಸ್ತೆಗೆ ಬಂದು ನಿಂತು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಎಲ್ಲಾ ಸರಿಯಾಗಿದ್ದರು ಸಹ ಜನರು ರೋಗಗಳಿಗೆ ತುತ್ತಾಗುತ್ತಾರೆ ಅಂದಮೇಲೆ ಈ ರಸ್ತೆಯಲ್ಲಿ ಓಡಾಡುವ ಜನರು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಹೇಳಿ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮಳೆಗಾಲದಲ್ಲಿ ಬಂದು ಬರೀ ಮಣ್ಣನ್ನು ಹಾಕಿಸುವುದು ಮಾತ್ರವಲ್ಲದೆ ಸರಿಯಾದ ರೀತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago