Latest

ಕೆಸರು ಗದ್ದೆಯಾದ ರಸ್ತೆ; ಜನರು ನಾಟಿ ಮಾಡಲೆಂದು ಕಾಯುತ್ತಿದ್ದಾರಾ ಅಧಿಕಾರಿಗಳು?

ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು ಕೆಸರೂ ಗೆದ್ದೆಯಾಗಿ ಪಾದಾಚಾರಗಳಿಗೆ ಒಡಾಡಲು ಸಮರ್ಪಕ ರಸ್ತೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಈ ರಸ್ತೆಯ ವಿಷಯ ಇಂದು ನಿನ್ನೆಯದಲ್ಲ ಸುಮಾರು 25 ವರ್ಷಗಳಿಂದಲೂ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ ಚಾಲಕನಗಿರಬೇಕು ಇಲ್ಲದಿದ್ದರೆ ಈ ರಸ್ತೆ ರಾಕ್ಷಸನಂತೆ ಬಾಯಿ ತೆಗೆದು ವಾಹನ ಮತ್ತು ಚಾಲಕ ಇಬ್ಬರನ್ನು ತನ್ನತ್ತ ಸೆಳೆದುಕೊಂಡು ಬಿಡುತ್ತದೆ.

ಪ್ರತಿ ವರ್ಷ ಕಾಟಾಚಾರಕ್ಕೆಂಬುವಂತೆ ನಾಲ್ಕಾರು ಟ್ರಿಪ್ ಮಣ್ಣು ಹಾಕಿಸಿ ಕೈತೂಳೆದುಕೂಳ್ಳುತ್ತಿದ ಪಂಚಾಯತಿ ಈ ಬಾರಿ ಕೂಡ ಅದೆ ಮೂಹರಂ ಮಣ್ಣು ಹಾಕಿ ಕೈತೊಳೆದುಕೊಳ್ಳುವ ಕೆಲಸ ಮಾಡಿದ್ದಾರೆ. ಆದರೆ ಇವರು ಮಾಡಿದ ಈ ಕೆಲಸದಿಂದ ರಸ್ತೆ ಮತ್ತಷ್ಟು ಹಾಳಾಗಿದೆ. ಈ ರಸ್ತೆಯ ಬದಿಯಲ್ಲಿ ಚರಂಡಿಗಳಿಲ್ಲದ ಕಾರಣ. ಮಳೆಗಾಲ ಮುಗಿಯುವಷ್ಟರಲ್ಲಿ ಕೊಳಚೆ ನೀರು ಸಹ ರಸ್ತೆಗೆ ಬಂದು ನಿಂತು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಎಲ್ಲಾ ಸರಿಯಾಗಿದ್ದರು ಸಹ ಜನರು ರೋಗಗಳಿಗೆ ತುತ್ತಾಗುತ್ತಾರೆ ಅಂದಮೇಲೆ ಈ ರಸ್ತೆಯಲ್ಲಿ ಓಡಾಡುವ ಜನರು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಹೇಳಿ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮಳೆಗಾಲದಲ್ಲಿ ಬಂದು ಬರೀ ಮಣ್ಣನ್ನು ಹಾಕಿಸುವುದು ಮಾತ್ರವಲ್ಲದೆ ಸರಿಯಾದ ರೀತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

10 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

11 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

12 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

13 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

14 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

17 hours ago