Latest

ಕೆಸರು ಗದ್ದೆಯಾದ ರಸ್ತೆ; ಜನರು ನಾಟಿ ಮಾಡಲೆಂದು ಕಾಯುತ್ತಿದ್ದಾರಾ ಅಧಿಕಾರಿಗಳು?

ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು ಕೆಸರೂ ಗೆದ್ದೆಯಾಗಿ ಪಾದಾಚಾರಗಳಿಗೆ ಒಡಾಡಲು ಸಮರ್ಪಕ ರಸ್ತೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಈ ರಸ್ತೆಯ ವಿಷಯ ಇಂದು ನಿನ್ನೆಯದಲ್ಲ ಸುಮಾರು 25 ವರ್ಷಗಳಿಂದಲೂ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ ಚಾಲಕನಗಿರಬೇಕು ಇಲ್ಲದಿದ್ದರೆ ಈ ರಸ್ತೆ ರಾಕ್ಷಸನಂತೆ ಬಾಯಿ ತೆಗೆದು ವಾಹನ ಮತ್ತು ಚಾಲಕ ಇಬ್ಬರನ್ನು ತನ್ನತ್ತ ಸೆಳೆದುಕೊಂಡು ಬಿಡುತ್ತದೆ.

ಪ್ರತಿ ವರ್ಷ ಕಾಟಾಚಾರಕ್ಕೆಂಬುವಂತೆ ನಾಲ್ಕಾರು ಟ್ರಿಪ್ ಮಣ್ಣು ಹಾಕಿಸಿ ಕೈತೂಳೆದುಕೂಳ್ಳುತ್ತಿದ ಪಂಚಾಯತಿ ಈ ಬಾರಿ ಕೂಡ ಅದೆ ಮೂಹರಂ ಮಣ್ಣು ಹಾಕಿ ಕೈತೊಳೆದುಕೊಳ್ಳುವ ಕೆಲಸ ಮಾಡಿದ್ದಾರೆ. ಆದರೆ ಇವರು ಮಾಡಿದ ಈ ಕೆಲಸದಿಂದ ರಸ್ತೆ ಮತ್ತಷ್ಟು ಹಾಳಾಗಿದೆ. ಈ ರಸ್ತೆಯ ಬದಿಯಲ್ಲಿ ಚರಂಡಿಗಳಿಲ್ಲದ ಕಾರಣ. ಮಳೆಗಾಲ ಮುಗಿಯುವಷ್ಟರಲ್ಲಿ ಕೊಳಚೆ ನೀರು ಸಹ ರಸ್ತೆಗೆ ಬಂದು ನಿಂತು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಎಲ್ಲಾ ಸರಿಯಾಗಿದ್ದರು ಸಹ ಜನರು ರೋಗಗಳಿಗೆ ತುತ್ತಾಗುತ್ತಾರೆ ಅಂದಮೇಲೆ ಈ ರಸ್ತೆಯಲ್ಲಿ ಓಡಾಡುವ ಜನರು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಹೇಳಿ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮಳೆಗಾಲದಲ್ಲಿ ಬಂದು ಬರೀ ಮಣ್ಣನ್ನು ಹಾಕಿಸುವುದು ಮಾತ್ರವಲ್ಲದೆ ಸರಿಯಾದ ರೀತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago