ಕುಂದಗೋಳ: ರಾಜ್ಯಾದ್ಯಂತ ವಿಪರೀತ ಮಳೆ ಸುರಿಯುತ್ತಿರುವ ಬೆನ್ನಲ್ಲೇ ರೈತರ ಬೆಳೆಗಳು ಜಲವೃತಗೂಂಡು ಬೆಳೆನಾಶ ಆಗಿ ಬಹಳಷ್ಟು ನಷ್ಟಾಗಿದ್ದು ಇದು ಒಂದೆಡೆಯಾದರೆ ಕೆಲವೆಡೆ ರಸ್ತೆಗಳು ಕೆಸರೂ ಗೆದ್ದೆಯಾಗಿ ಪಾದಾಚಾರಗಳಿಗೆ ಒಡಾಡಲು ಸಮರ್ಪಕ ರಸ್ತೆಯಿಲ್ಲದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.
ಈ ರಸ್ತೆಯ ವಿಷಯ ಇಂದು ನಿನ್ನೆಯದಲ್ಲ ಸುಮಾರು 25 ವರ್ಷಗಳಿಂದಲೂ ಮಳೆಗಾಲದಲ್ಲಿ ಇದೆ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ದುರಸ್ಥಿಗೆ ಮಾತ್ರ ಕ್ರಮಕೈಗೂಂಡಿಲ್ಲ. ರಸ್ತೆ ಕೆಸರು ಗದ್ದೆ ರೀತಿಯಲ್ಲಿ ಪರಿವರ್ತನೆಗೊಂಡಿರುವ ಕಾರಣ ಈ ರಸ್ತೆಯಲ್ಲಿ ಓಡಾಡುವ ಜನರು ಬಟ್ಟೆ ಮೇಲೆತ್ತಿಕೊಂಡು ಕೆಸರು ಗದ್ದೆಯಲ್ಲೇ ಓಡಾಡುವ ರೀತಿಯಲ್ಲಿ ಓಡಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ರಸ್ತೆಯಲ್ಲಿ ವಾಹನ ಚಲಿಸುವ ಚಾಲಕನಂತೂ ಚಾಣಾಕ್ಷ ಚಾಲಕನಗಿರಬೇಕು ಇಲ್ಲದಿದ್ದರೆ ಈ ರಸ್ತೆ ರಾಕ್ಷಸನಂತೆ ಬಾಯಿ ತೆಗೆದು ವಾಹನ ಮತ್ತು ಚಾಲಕ ಇಬ್ಬರನ್ನು ತನ್ನತ್ತ ಸೆಳೆದುಕೊಂಡು ಬಿಡುತ್ತದೆ.
ಪ್ರತಿ ವರ್ಷ ಕಾಟಾಚಾರಕ್ಕೆಂಬುವಂತೆ ನಾಲ್ಕಾರು ಟ್ರಿಪ್ ಮಣ್ಣು ಹಾಕಿಸಿ ಕೈತೂಳೆದುಕೂಳ್ಳುತ್ತಿದ ಪಂಚಾಯತಿ ಈ ಬಾರಿ ಕೂಡ ಅದೆ ಮೂಹರಂ ಮಣ್ಣು ಹಾಕಿ ಕೈತೊಳೆದುಕೊಳ್ಳುವ ಕೆಲಸ ಮಾಡಿದ್ದಾರೆ. ಆದರೆ ಇವರು ಮಾಡಿದ ಈ ಕೆಲಸದಿಂದ ರಸ್ತೆ ಮತ್ತಷ್ಟು ಹಾಳಾಗಿದೆ. ಈ ರಸ್ತೆಯ ಬದಿಯಲ್ಲಿ ಚರಂಡಿಗಳಿಲ್ಲದ ಕಾರಣ. ಮಳೆಗಾಲ ಮುಗಿಯುವಷ್ಟರಲ್ಲಿ ಕೊಳಚೆ ನೀರು ಸಹ ರಸ್ತೆಗೆ ಬಂದು ನಿಂತು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಎಲ್ಲಾ ಸರಿಯಾಗಿದ್ದರು ಸಹ ಜನರು ರೋಗಗಳಿಗೆ ತುತ್ತಾಗುತ್ತಾರೆ ಅಂದಮೇಲೆ ಈ ರಸ್ತೆಯಲ್ಲಿ ಓಡಾಡುವ ಜನರು ಎಷ್ಟರ ಮಟ್ಟಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಹೇಳಿ.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಮಳೆಗಾಲದಲ್ಲಿ ಬಂದು ಬರೀ ಮಣ್ಣನ್ನು ಹಾಕಿಸುವುದು ಮಾತ್ರವಲ್ಲದೆ ಸರಿಯಾದ ರೀತಿಯಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.
ವರದಿ: ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…