ಮುಂಡಗೋಡ ತಾಲೂಕಿನ ಪಟ್ಟಣದಲ್ಲಿ ಕಳೆದ ತಿಂಗಳು ನಡೆದ ಮನೆ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಮುಂಡಗೋಡ ಪೋಲಿಸರು ಯಶಸ್ವಿಯಾಗಿದ್ದಾರೆ.
ದಿನಾಂಕ 28-10-2024ರಂದು ಪಟ್ಟಣದ ಭರತನಗರದಲ್ಲಿ ಇರುವ ಅರ್ಜುನ್ ಸಿಂಗ್ ಠಾಕೂರ್ ಅವರ ಮನೆಯಲ್ಲಿ ಕಿಟಕಿಗೆ ಹಾಕಿದ್ದ ಜಾಲರಿಯನ್ನು ಮುರಿದು ಮನೆಯೊಳಗೆ ನುಗ್ಗಿ ಮನೆಯಲ್ಲಿ ಇದ್ದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿದ್ದು ಪ್ರಕರಣವನ್ನು ಕೈಗೆತ್ತಿಕೊಂಡ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಚೇತನ್ ತಂದೆ ನರೇಶ ಪಾರ್ಗೆ, ವಿನಾಯಕ್ ಕರಿಯಪ್ಪ ಬೋವಿವಡ್ಡರ್ ಸಾ : ಇಬ್ಬರೂ ಶುಭಾಶ ನಗರ, ಮುಂಡಗೋಡರವರು ಬಂಧಿತ ಆರೋಪಿಗಳಾಗಿದ್ದಾರೆ ಬಂಧಿತರಿಂದ 10 ಗ್ರಾಂ ಬಂಗಾರದ ಚೈನ್ (52,000 ರೂ), 2.5 ಗ್ರಾಂ ತೂಕದ ಬಂಗಾರದ ಉಂಗುರ (20,500 ರೂ) , ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣವನ್ನು ಭೇದಿಸಲು ಶ್ರೀ ನಾರಾಯಣ ಎಮ್ ಪೋಲಿಸ್ ಅಧಿಕ್ಷಕರು ಉತ್ತರ ಕನ್ನಡ, ಶ್ರೀ ಸಿ ಟಿ ಜಯಕುಮಾರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಜಗದೀಶ್ ಎಂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ್ ಕೆ ಎಲ್ ಡಿಎಸ್ಪಿ ಶಿರಸಿರವರ ಮಾರ್ಗದರ್ಶನದಲ್ಲಿ ಮುಂಡಗೋಡದ ಪೋಲಿಸ್ ನಿರೀಕ್ಷಕರಾದ ಶ್ರೀ ರಂಗನಾಥ ನೀಲಮ್ಮನವರ್, ಪಿಎಸ್ಐ ಹನುಮಂತ ಕಡಗುಂಟಿ ಸಿಬ್ಬಂದಿಗಳಾದ ಕೋಟೇಶ್ ನಾಗರವಳ್ಳಿ, ಅಣ್ಣಪ್ಪ ಬುಡಗೇರ, ಮಹಾಂತೇಶ ಮುಧೋಳ, ತಿರುಪತಿ ಚೌಡಣ್ಣನವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಕಾರ್ಯಚರಣೆಯಲ್ಲಿ ಭಾಗವಹಿಸಿದ ಠಾಣೆಯ ಅಧಿಕಾರಿ/ಸಿಬ್ಬಂದಿಗಳನ್ನು ಪೋಲಿಸ್ ಅಧಿಕ್ಷಕರು ಪ್ರಶಂಸಿಸಿ, ಶ್ಲಾಘಿಸಲಾಗಿದೆ.
ವರದಿ: ಮಂಜುನಾಥ್ ಎಫ್ ಎಚ್
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…