ಮುಂಡಗೋಡ: ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಮನಕೇರಿ ನಿವಾಸಿ ಆಗಿರುವ ಮೊಹಮ್ಮದ್ ನಜೀರ್ ಫಾರೂಕ್ ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.
ಮುಂಡಗೋಡ ತಾಲೂಕಿನ ಮಳಗಿ ಸಮೀಪ ದಾಸನಕೊಪ್ಪ ಕ್ರಾಸ್ ಹತ್ತಿರ ರಸ್ತೆಯಲ್ಲಿ ಯಾವುದೇ ಪರವಾನಿಗೆಯನ್ನು ಪಡೆಯದೆ ಸುಮಾರು 40 ಸಾವಿರ ರೂಪಾಯಿ ಮೌಲ್ಯದ 500 ಗ್ರಾಂ ತೂಕದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಗಾಂಜಾ ಸಮೇತ ಬಂಧಿಸಲಾಗಿದೆ.
ಸಿಪಿಐ ಸಿದ್ದಪ್ಪ ಸಿಮಾನಿ ಅವರ ಮಾರ್ಗದರ್ಶನದಲ್ಲಿ ಪಿ ಎಸ್ ಐ ಯಲ್ಲಾಲಿಂಗ ಕುನ್ನೂರ್, ಕ್ರೈಂ ಪಿಎಸ್ಐ ಎನ್ ಡಿ ಜಕ್ಕಣ್ಣನವರ್ ಸಿಬ್ಬಂದಿಗಳಾದ ಕೊಟೇಶ್ ನಾಗರೊಳ್ಳಿ, ರಾಜೇಶ್ ನಾಯಕ್, ಮಹಾಂತೇಶ್ ಮುಧೋಳ, ಅಣ್ಣಪ್ಪ ಬಡಿಗೇರ್, ತಿರುಪತಿ ಚೌಡಣ್ಣನವರ್, ಸಂಜು ರಾಥೋಡ್ ದಾಳಿಯಲ್ಲಿ ಪಾಲ್ಗೊಂಡಿದ್ದರು.
ವರದಿ: ಮಂಜುನಾಥ ಹರಿಜನ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…