Latest

ಮುಂಡಗೋಡಕ್ಕೆ ಜಿಲ್ಲಾಧಿಕಾರಿ ಭೇಟಿ..!

ಮುಂಡಗೋಡ ಪಟ್ಟಣಕ್ಕೆ ಹಾಗೂ ಟಿಬೇಟಿಯನ್ ಕಾಲೋನಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಇಂದು ಭೇಟಿ ನೀಡಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಮುಂಡಗೋಡದ ಟಿಬೇಟಿಯನ್ ಕಾಲೋನಿ, ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸ್ಥಳಗಳಿಗೆ, ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ, ಹಾಗೂ ಇತ್ತೀಚಿನ ದಿನಗಳಲ್ಲಿ ಭಾರಿ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿರುವ ಹತ್ತಿರ ಬಂಕಾಪು ರಸ್ತೆಗೆ ( ಹೆಗಡೆ ದವಾಖಾನೆ) ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಪರಿಹಾರದ ಕುರಿತು ಚರ್ಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಬಂಕಾಪುರ ರಸ್ತೆಯಲ್ಲಿ ಭಾರಿ ಮಳೆಯಿಂದ ಆಗುತ್ತಿರುವ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳಿಗೆ ನಗರೋತ್ಥಾನ ಯೋಜನೆಯಲ್ಲಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತಿಯವರು ಮಾಡಲಿದ್ದಾರೆ ಎಂದು ತಿಳಿಸಿದರು.

ಅತೀ ಹೆಚ್ಚು ಮಳೆಯಿಂದ ಇವರೆಗೆ ತಾಲೂಕಿನಲ್ಲಿ 39 ಮನೆಗಳು ತೀವ್ರ ಹಾನಿಗೆ ಒಳಪಟ್ಟಿವೆ ಇವುಗಳು 5 ಲಕ್ಷ ರೂಪಾಯಿಯ ಪರಿಹಾರದ ಅಡಿಯಲ್ಲಿ ಬರುತ್ತವೆ ಇವುಗಳಿಗೆ ಮೊದಲ ಹಂತದಲ್ಲಿ 95 ಸಾವಿರ ರೂಪಾಯಿಗಳನ್ನು ಮೊದಲ ಹಂತವಾಗಿ 48 ಗಂಟೆಯಿಂದ 72 ಗಂಟೆಗಳ ಒಳಗಾಗಿ ನೀಡುವಂತೆ ಸೂಚನೆ ನೀಡಲಾಗಿದೆ. ಉಳಿದ ಹಣವನ್ನು ಹಂತಹಂತವಾಗಿ ಮನೆ ನಿರ್ಮಿಸುವ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ನಂತರ 99 ಮನೆಗಳು (ಪ್ರಕರಣಗಳು) ಸಿ ಕೆಟಗರಿಯಲ್ಲಿ ಬರುತ್ತವೆ ಇವುಗಳಿಗೆ 50 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್. ಪಿ ಸುಮನ್ ಪನ್ನೇಕರ್, ಶಿರಸಿ ವಿಭಾಗದ ಡಿಎಸ್ಪಿ ರವಿ ನಾಯ್ಕ ,ಸಿ.ಪಿ.ಐ ಸಿದ್ದಪ್ಪ ಸಿಮಾನಿ, ತಹಸಿಲ್ದಾರ್ ಶಂಕರ್ ಗೌಡಿ,ಪಟ್ಟಣ ಪಂಚಾಯತಿ ಸದಸ್ಯರಾದ ಪಣಿರಾಜ ಹದಳಗಿ,ಪ್ರಮುಖರಾದ ಸಿದ್ದಪ್ಪ ಹಡಪದ, ಚಿದಾನಂದ ಹರಿಜನ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಇತರರು ಹಾಜರಿದ್ದರು.
ವರದಿ :ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago