ಮುಂಡಗೋಡ ಪಟ್ಟಣಕ್ಕೆ ಹಾಗೂ ಟಿಬೇಟಿಯನ್ ಕಾಲೋನಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಇಂದು ಭೇಟಿ ನೀಡಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಮುಂಡಗೋಡದ ಟಿಬೇಟಿಯನ್ ಕಾಲೋನಿ, ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸ್ಥಳಗಳಿಗೆ, ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ, ಹಾಗೂ ಇತ್ತೀಚಿನ ದಿನಗಳಲ್ಲಿ ಭಾರಿ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿರುವ ಹತ್ತಿರ ಬಂಕಾಪು ರಸ್ತೆಗೆ ( ಹೆಗಡೆ ದವಾಖಾನೆ) ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಪರಿಹಾರದ ಕುರಿತು ಚರ್ಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಬಂಕಾಪುರ ರಸ್ತೆಯಲ್ಲಿ ಭಾರಿ ಮಳೆಯಿಂದ ಆಗುತ್ತಿರುವ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳಿಗೆ ನಗರೋತ್ಥಾನ ಯೋಜನೆಯಲ್ಲಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತಿಯವರು ಮಾಡಲಿದ್ದಾರೆ ಎಂದು ತಿಳಿಸಿದರು.
ಅತೀ ಹೆಚ್ಚು ಮಳೆಯಿಂದ ಇವರೆಗೆ ತಾಲೂಕಿನಲ್ಲಿ 39 ಮನೆಗಳು ತೀವ್ರ ಹಾನಿಗೆ ಒಳಪಟ್ಟಿವೆ ಇವುಗಳು 5 ಲಕ್ಷ ರೂಪಾಯಿಯ ಪರಿಹಾರದ ಅಡಿಯಲ್ಲಿ ಬರುತ್ತವೆ ಇವುಗಳಿಗೆ ಮೊದಲ ಹಂತದಲ್ಲಿ 95 ಸಾವಿರ ರೂಪಾಯಿಗಳನ್ನು ಮೊದಲ ಹಂತವಾಗಿ 48 ಗಂಟೆಯಿಂದ 72 ಗಂಟೆಗಳ ಒಳಗಾಗಿ ನೀಡುವಂತೆ ಸೂಚನೆ ನೀಡಲಾಗಿದೆ. ಉಳಿದ ಹಣವನ್ನು ಹಂತಹಂತವಾಗಿ ಮನೆ ನಿರ್ಮಿಸುವ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ನಂತರ 99 ಮನೆಗಳು (ಪ್ರಕರಣಗಳು) ಸಿ ಕೆಟಗರಿಯಲ್ಲಿ ಬರುತ್ತವೆ ಇವುಗಳಿಗೆ 50 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್. ಪಿ ಸುಮನ್ ಪನ್ನೇಕರ್, ಶಿರಸಿ ವಿಭಾಗದ ಡಿಎಸ್ಪಿ ರವಿ ನಾಯ್ಕ ,ಸಿ.ಪಿ.ಐ ಸಿದ್ದಪ್ಪ ಸಿಮಾನಿ, ತಹಸಿಲ್ದಾರ್ ಶಂಕರ್ ಗೌಡಿ,ಪಟ್ಟಣ ಪಂಚಾಯತಿ ಸದಸ್ಯರಾದ ಪಣಿರಾಜ ಹದಳಗಿ,ಪ್ರಮುಖರಾದ ಸಿದ್ದಪ್ಪ ಹಡಪದ, ಚಿದಾನಂದ ಹರಿಜನ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಇತರರು ಹಾಜರಿದ್ದರು.
ವರದಿ :ಮಂಜುನಾಥ ಹರಿಜನ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…