ಮುಂಡಗೋಡ ಪಟ್ಟಣಕ್ಕೆ ಹಾಗೂ ಟಿಬೇಟಿಯನ್ ಕಾಲೋನಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಇಂದು ಭೇಟಿ ನೀಡಿ ಹಲವಾರು ವಿಷಯಗಳ ಕುರಿತು ಚರ್ಚಿಸಿದರು.
ಮುಂಡಗೋಡದ ಟಿಬೇಟಿಯನ್ ಕಾಲೋನಿ, ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸ್ಥಳಗಳಿಗೆ, ಪಟ್ಟಣದ ಹೊರವಲಯದಲ್ಲಿರುವ ಅಮ್ಮಾಜಿ ಕೆರೆ, ಹಾಗೂ ಇತ್ತೀಚಿನ ದಿನಗಳಲ್ಲಿ ಭಾರಿ ಮಳೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿರುವ ಹತ್ತಿರ ಬಂಕಾಪು ರಸ್ತೆಗೆ ( ಹೆಗಡೆ ದವಾಖಾನೆ) ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಪರಿಹಾರದ ಕುರಿತು ಚರ್ಚಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಬಂಕಾಪುರ ರಸ್ತೆಯಲ್ಲಿ ಭಾರಿ ಮಳೆಯಿಂದ ಆಗುತ್ತಿರುವ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳಿಗೆ ನಗರೋತ್ಥಾನ ಯೋಜನೆಯಲ್ಲಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯತಿಯವರು ಮಾಡಲಿದ್ದಾರೆ ಎಂದು ತಿಳಿಸಿದರು.
ಅತೀ ಹೆಚ್ಚು ಮಳೆಯಿಂದ ಇವರೆಗೆ ತಾಲೂಕಿನಲ್ಲಿ 39 ಮನೆಗಳು ತೀವ್ರ ಹಾನಿಗೆ ಒಳಪಟ್ಟಿವೆ ಇವುಗಳು 5 ಲಕ್ಷ ರೂಪಾಯಿಯ ಪರಿಹಾರದ ಅಡಿಯಲ್ಲಿ ಬರುತ್ತವೆ ಇವುಗಳಿಗೆ ಮೊದಲ ಹಂತದಲ್ಲಿ 95 ಸಾವಿರ ರೂಪಾಯಿಗಳನ್ನು ಮೊದಲ ಹಂತವಾಗಿ 48 ಗಂಟೆಯಿಂದ 72 ಗಂಟೆಗಳ ಒಳಗಾಗಿ ನೀಡುವಂತೆ ಸೂಚನೆ ನೀಡಲಾಗಿದೆ. ಉಳಿದ ಹಣವನ್ನು ಹಂತಹಂತವಾಗಿ ಮನೆ ನಿರ್ಮಿಸುವ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ನಂತರ 99 ಮನೆಗಳು (ಪ್ರಕರಣಗಳು) ಸಿ ಕೆಟಗರಿಯಲ್ಲಿ ಬರುತ್ತವೆ ಇವುಗಳಿಗೆ 50 ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಸ್. ಪಿ ಸುಮನ್ ಪನ್ನೇಕರ್, ಶಿರಸಿ ವಿಭಾಗದ ಡಿಎಸ್ಪಿ ರವಿ ನಾಯ್ಕ ,ಸಿ.ಪಿ.ಐ ಸಿದ್ದಪ್ಪ ಸಿಮಾನಿ, ತಹಸಿಲ್ದಾರ್ ಶಂಕರ್ ಗೌಡಿ,ಪಟ್ಟಣ ಪಂಚಾಯತಿ ಸದಸ್ಯರಾದ ಪಣಿರಾಜ ಹದಳಗಿ,ಪ್ರಮುಖರಾದ ಸಿದ್ದಪ್ಪ ಹಡಪದ, ಚಿದಾನಂದ ಹರಿಜನ, ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಇತರರು ಹಾಜರಿದ್ದರು.
ವರದಿ :ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…