Latest

ಮುಂಡಗೋಡು ತಾಲೂಕಿನ ಚೆಸ್ ಆಟದ ಶಕ್ತಿ ಕೇಂದ್ರ ಸುಳ್ಳಳ್ಳಿ..!

ಮುಂಡಗೋಡ: ತಾಲೂಕಿನ ಸುಳ್ಳಳ್ಳಿ ಗ್ರಾಮದಲ್ಲಿ ಚೆಸ್ ಆಟಕ್ಕೆ ಭದ್ರ ಬುನಾದಿ ಸಿಕ್ಕಿದೆ ಎಂದು ಹೇಳಬಹುದು ಹಾಗಾಗಿ ಪ್ರತಿವರ್ಷ ರಾಜ್ಯಮಟ್ಟದವರೆಗೂ ಎರಡ್ಮೂರು ವಿದ್ಯಾರ್ಥಿಗಳು ಪ್ರತಿನಿಧಿಸುತ್ತಾರೆ.

2022 ಮತ್ತು 23ನೇ ಸಾಲಿನಲ್ಲಿ ಬೇರೆ ಬೇರೆ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ಒಟ್ಟು 15 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಇದೆ ಸೆಪ್ಟೆಂಬರ್ 8ರಂದು ಪಾಳಾ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಳಳ್ಳಿಯ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

14 ವರ್ಷದೊಳಗಿನವರ ಬಾಲಕರ ವಿಭಾಗ
1st ವಿನಾಯಕ ಬಸವಣ್ಣಿ ಪಾಟೀಲ
2nd ವಿಕಾಸ ಕವಲಗಿ
4th ಮಹಮ್ಮದ್ ಸಲೀಂ ಮಾಬುಸಾಬ ಸುಳ್ಳಳ್ಳಿ

14 ವರ್ಷದೊಳಗಿನವರ ಬಾಲಕಿಯರ ವಿಭಾಗ
1st ಭವ್ಯ ಲೋಕಪ್ಪ ಅಮ್ಮಿನಬಾವಿ
2nd ರಿಜಾಅಂಜುಮ್ ರಿಯಾಜಸಾಬಸಾಬ ಹನಕನಳ್ಳಿ
3rd ಸುನಿತಾ ವಿಠ್ಠು ಯಮಕರ
4th ಅರ್ಪಿತಾ ಚಂದ್ರಕಾಂತ ಹುಡೇಲಕೊಪ್ಪ

ಸರಕಾರಿ ಅಂದಲಗಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ವಿದ್ಯಾರ್ಥಿಗಳು
ಬಾಲಕರ ವಿಭಾಗ
2nd ಲೋಕೇಶ್ ಗೌಡ
3rd ಇಸ್ಮಾಯಿಲ್ ಮಹಮ್ಮದ್ಅಲಿ ಮಮ್ದುನವರ
4th ಲಕ್ಕು ವಿಠ್ಠು ಯಮಕರ

ಬಾಲಕಿಯರ ವಿಭಾಗ
1st ಆಫ್ರೀನ್ ಮಕ್ಬುಲ್ ಮಮ್ದುನವರ
2nd ನಿಖಿತಾ ಬಸವಣ್ಣಿ ಹೆಗ್ಗಾದಿ
3rd ಸುವರ್ಣ ಈಶ್ವರ ಮಿರಾಶಿ

ಕರಗಿನಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ
5th ಮಹೇಂದ್ರ ಗೌಡ

ಪಿಯುಸಿ ವಿಭಾಗದಲ್ಲಿ ಮುಂಡಗೋಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ
2nd ನಾಗರಾಜ ಮಾದರ

ಹೀಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು
ಪ್ರೌಢಶಾಲಾ ವಿಭಾಗದಲ್ಲಿ ಏಳು ವಿದ್ಯಾರ್ಥಿಗಳು
ಹಾಗೂ ಪಿಯುಸಿ ವಿಭಾಗದಲ್ಲಿ ಒಬ್ಬ ವಿದ್ಯಾರ್ಥಿ
ಒಟ್ಟು 15 ವಿದ್ಯಾರ್ಥಿಗಳು ಈ ವರ್ಷ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರತಿ ವರ್ಷ ಚೆಸ್ ಆಟದಲ್ಲಿ ಈ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಳ್ಳಳ್ಳಿಯ ಎಸ್ ಡಿಎಂ ಸಿ ಸಮಿತಿಯವರು, ಶಾಲೆಯ ಮುಖ್ಯ ಶಿಕ್ಷಕರು,ಶಿಕ್ಷಕ ಬಳಗದವರು ಗ್ರಾಮಸ್ಥರು ಹಾಗೂ ಅಂದಲಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ ಹಾಗೆಯೇ ಜಿಲ್ಲಾಮಟ್ಟದಲ್ಲೂ ಉತ್ತಮ ಸಾಧನೆಗೈಲಿ ಎಂದು ಸರ್ವರು ಆಶಿಸುತ್ತಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಚೆಸ್ ಆಟದ ಬುನಾದಿ ಹಂತದ ನಿಯಮಗಳು ಹಾಗೂ ಮಾರ್ಗದರ್ಶನ ನೀಡಿದವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಳಗದವರು. ಸುಳ್ಳಳ್ಳಿ ಶಾಲೆಯಲ್ಲಿ ಊಟದ ವಿರಾಮದ ಸಮಯದಲ್ಲಿ ಹಾಗೂ ಸಂಜೆ ಶಾಲಾ ಅವಧಿಯ ನಂತರದಲ್ಲಿ ಮಕ್ಕಳಿಗೆ ಚೆಸ್ ಆಟದ ಅಭ್ಯಾಸ ಮಾಡಿಸಲಾಗುತ್ತದೆ.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

8 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

8 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

9 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

9 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago