Latest

ಮುಂಡಗೋಡು ತಾಲೂಕಿನ ಚೆಸ್ ಆಟದ ಶಕ್ತಿ ಕೇಂದ್ರ ಸುಳ್ಳಳ್ಳಿ..!

ಮುಂಡಗೋಡ: ತಾಲೂಕಿನ ಸುಳ್ಳಳ್ಳಿ ಗ್ರಾಮದಲ್ಲಿ ಚೆಸ್ ಆಟಕ್ಕೆ ಭದ್ರ ಬುನಾದಿ ಸಿಕ್ಕಿದೆ ಎಂದು ಹೇಳಬಹುದು ಹಾಗಾಗಿ ಪ್ರತಿವರ್ಷ ರಾಜ್ಯಮಟ್ಟದವರೆಗೂ ಎರಡ್ಮೂರು ವಿದ್ಯಾರ್ಥಿಗಳು ಪ್ರತಿನಿಧಿಸುತ್ತಾರೆ.

2022 ಮತ್ತು 23ನೇ ಸಾಲಿನಲ್ಲಿ ಬೇರೆ ಬೇರೆ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ಒಟ್ಟು 15 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಇದೆ ಸೆಪ್ಟೆಂಬರ್ 8ರಂದು ಪಾಳಾ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಳಳ್ಳಿಯ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

14 ವರ್ಷದೊಳಗಿನವರ ಬಾಲಕರ ವಿಭಾಗ
1st ವಿನಾಯಕ ಬಸವಣ್ಣಿ ಪಾಟೀಲ
2nd ವಿಕಾಸ ಕವಲಗಿ
4th ಮಹಮ್ಮದ್ ಸಲೀಂ ಮಾಬುಸಾಬ ಸುಳ್ಳಳ್ಳಿ

14 ವರ್ಷದೊಳಗಿನವರ ಬಾಲಕಿಯರ ವಿಭಾಗ
1st ಭವ್ಯ ಲೋಕಪ್ಪ ಅಮ್ಮಿನಬಾವಿ
2nd ರಿಜಾಅಂಜುಮ್ ರಿಯಾಜಸಾಬಸಾಬ ಹನಕನಳ್ಳಿ
3rd ಸುನಿತಾ ವಿಠ್ಠು ಯಮಕರ
4th ಅರ್ಪಿತಾ ಚಂದ್ರಕಾಂತ ಹುಡೇಲಕೊಪ್ಪ

ಸರಕಾರಿ ಅಂದಲಗಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ವಿದ್ಯಾರ್ಥಿಗಳು
ಬಾಲಕರ ವಿಭಾಗ
2nd ಲೋಕೇಶ್ ಗೌಡ
3rd ಇಸ್ಮಾಯಿಲ್ ಮಹಮ್ಮದ್ಅಲಿ ಮಮ್ದುನವರ
4th ಲಕ್ಕು ವಿಠ್ಠು ಯಮಕರ

ಬಾಲಕಿಯರ ವಿಭಾಗ
1st ಆಫ್ರೀನ್ ಮಕ್ಬುಲ್ ಮಮ್ದುನವರ
2nd ನಿಖಿತಾ ಬಸವಣ್ಣಿ ಹೆಗ್ಗಾದಿ
3rd ಸುವರ್ಣ ಈಶ್ವರ ಮಿರಾಶಿ

ಕರಗಿನಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ
5th ಮಹೇಂದ್ರ ಗೌಡ

ಪಿಯುಸಿ ವಿಭಾಗದಲ್ಲಿ ಮುಂಡಗೋಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ
2nd ನಾಗರಾಜ ಮಾದರ

ಹೀಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು
ಪ್ರೌಢಶಾಲಾ ವಿಭಾಗದಲ್ಲಿ ಏಳು ವಿದ್ಯಾರ್ಥಿಗಳು
ಹಾಗೂ ಪಿಯುಸಿ ವಿಭಾಗದಲ್ಲಿ ಒಬ್ಬ ವಿದ್ಯಾರ್ಥಿ
ಒಟ್ಟು 15 ವಿದ್ಯಾರ್ಥಿಗಳು ಈ ವರ್ಷ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರತಿ ವರ್ಷ ಚೆಸ್ ಆಟದಲ್ಲಿ ಈ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಳ್ಳಳ್ಳಿಯ ಎಸ್ ಡಿಎಂ ಸಿ ಸಮಿತಿಯವರು, ಶಾಲೆಯ ಮುಖ್ಯ ಶಿಕ್ಷಕರು,ಶಿಕ್ಷಕ ಬಳಗದವರು ಗ್ರಾಮಸ್ಥರು ಹಾಗೂ ಅಂದಲಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ ಹಾಗೆಯೇ ಜಿಲ್ಲಾಮಟ್ಟದಲ್ಲೂ ಉತ್ತಮ ಸಾಧನೆಗೈಲಿ ಎಂದು ಸರ್ವರು ಆಶಿಸುತ್ತಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಚೆಸ್ ಆಟದ ಬುನಾದಿ ಹಂತದ ನಿಯಮಗಳು ಹಾಗೂ ಮಾರ್ಗದರ್ಶನ ನೀಡಿದವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಳಗದವರು. ಸುಳ್ಳಳ್ಳಿ ಶಾಲೆಯಲ್ಲಿ ಊಟದ ವಿರಾಮದ ಸಮಯದಲ್ಲಿ ಹಾಗೂ ಸಂಜೆ ಶಾಲಾ ಅವಧಿಯ ನಂತರದಲ್ಲಿ ಮಕ್ಕಳಿಗೆ ಚೆಸ್ ಆಟದ ಅಭ್ಯಾಸ ಮಾಡಿಸಲಾಗುತ್ತದೆ.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

6 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

9 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago