Latest

ಬಳ್ಳಾರಿಯಲ್ಲಿ ಪಾಲಿಕೆ ವಾಹನ ದುರಂತ: ಆಟವಾಡುತ್ತಿದ್ದ 3 ವರ್ಷದ ಮಗು ಸಾವಿಗೆ ಶರಣು

ಬಳ್ಳಾರಿ, ಜುಲೈ 29: ಬಳ್ಳಾರಿಯಲ್ಲಿ ಮನಕಲಕುವ ಅಪಘಾತ ಸಂಭವಿಸಿದ್ದು, ಕಸ ಸಂಗ್ರಹ ಮಾಡುವ ಮಹಾನಗರ ಪಾಲಿಕೆ ವಾಹನದ ಹರಿವಿನಿಂದ ಮೂರು ವರ್ಷದ ಮಗು ಪ್ರಾಣ ಕಳೆದುಕೊಂಡಿದೆ. ಈ ದುರ್ಘಟನೆ ನಗರದ ಬಾಪೂಜಿ ನಗರದಲ್ಲಿ ನಡೆದಿದೆ.

ಮೃತ ಬಾಲಕನನ್ನು ಸಮರ್ ಮತ್ತು ಶೈಲಜಾ ದಂಪತಿಯ ಪುತ್ರ ವಿಕ್ಕಿ ಎಂದು ಗುರುತಿಸಲಾಗಿದೆ. ಮಗು ತಮ್ಮ ಮನೆಯ ಮುಂದೇ ಆಟವಾಡುತ್ತಿದ್ದ ವೇಳೆ, ಕಸ ಕಲೆ ಹಾಕುವ ಪಾಲಿಕೆಯ ವಾಹನ ನಿಯಂತ್ರಣ ತಪ್ಪಿ ಬಂದು ಮಗುವಿನ ಮೇಲೆ ಹರಿದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಮಗುವನ್ನು ಆಸ್ಪತ್ರೆಗೆ ಸಾಗಿಸಲತ್ನಿಸಿದರೂ, ಆತ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಳ್ಳಾರಿ ನಗರ ಪೊಲೀಸ್ ಇಲಾಖೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ. ಇತ್ತ ಬಾಲಕನ ಸಾವಿನಿಂದ ಬಾಪೂಜಿ ನಗರದಲ್ಲಿ ದುಃಖದ ಛಾಯೆ ಮಡಿದಿದ್ದು, ಸಾರ್ವಜನಿಕರು ಪಾಲಿಕೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಜತೆಗೆ, ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನಗಳ ನಿರ್ವಹಣೆ, ಚಾಲಕರ ತರಬೇತಿ ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಕುರಿತು ಪ್ರಶ್ನೆಗಳು ಉದ್ಭವವಾಗಿವೆ.

ಈ ಘಟನೆ ಸಂಬಂಧಿಸಿ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

2 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

15 hours ago