ಬಳ್ಳಾರಿ, ಜುಲೈ 29: ಬಳ್ಳಾರಿಯಲ್ಲಿ ಮನಕಲಕುವ ಅಪಘಾತ ಸಂಭವಿಸಿದ್ದು, ಕಸ ಸಂಗ್ರಹ ಮಾಡುವ ಮಹಾನಗರ ಪಾಲಿಕೆ ವಾಹನದ ಹರಿವಿನಿಂದ ಮೂರು ವರ್ಷದ ಮಗು ಪ್ರಾಣ ಕಳೆದುಕೊಂಡಿದೆ. ಈ ದುರ್ಘಟನೆ ನಗರದ ಬಾಪೂಜಿ ನಗರದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮರ್ ಮತ್ತು ಶೈಲಜಾ ದಂಪತಿಯ ಪುತ್ರ ವಿಕ್ಕಿ ಎಂದು ಗುರುತಿಸಲಾಗಿದೆ. ಮಗು ತಮ್ಮ ಮನೆಯ ಮುಂದೇ ಆಟವಾಡುತ್ತಿದ್ದ ವೇಳೆ, ಕಸ ಕಲೆ ಹಾಕುವ ಪಾಲಿಕೆಯ ವಾಹನ ನಿಯಂತ್ರಣ ತಪ್ಪಿ ಬಂದು ಮಗುವಿನ ಮೇಲೆ ಹರಿದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಮಗುವನ್ನು ಆಸ್ಪತ್ರೆಗೆ ಸಾಗಿಸಲತ್ನಿಸಿದರೂ, ಆತ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಳ್ಳಾರಿ ನಗರ ಪೊಲೀಸ್ ಇಲಾಖೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ. ಇತ್ತ ಬಾಲಕನ ಸಾವಿನಿಂದ ಬಾಪೂಜಿ ನಗರದಲ್ಲಿ ದುಃಖದ ಛಾಯೆ ಮಡಿದಿದ್ದು, ಸಾರ್ವಜನಿಕರು ಪಾಲಿಕೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರ ಜತೆಗೆ, ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನಗಳ ನಿರ್ವಹಣೆ, ಚಾಲಕರ ತರಬೇತಿ ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಕುರಿತು ಪ್ರಶ್ನೆಗಳು ಉದ್ಭವವಾಗಿವೆ.
ಈ ಘಟನೆ ಸಂಬಂಧಿಸಿ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…