ಬಳ್ಳಾರಿ, ಜುಲೈ 29: ಬಳ್ಳಾರಿಯಲ್ಲಿ ಮನಕಲಕುವ ಅಪಘಾತ ಸಂಭವಿಸಿದ್ದು, ಕಸ ಸಂಗ್ರಹ ಮಾಡುವ ಮಹಾನಗರ ಪಾಲಿಕೆ ವಾಹನದ ಹರಿವಿನಿಂದ ಮೂರು ವರ್ಷದ ಮಗು ಪ್ರಾಣ ಕಳೆದುಕೊಂಡಿದೆ. ಈ ದುರ್ಘಟನೆ ನಗರದ ಬಾಪೂಜಿ ನಗರದಲ್ಲಿ ನಡೆದಿದೆ.
ಮೃತ ಬಾಲಕನನ್ನು ಸಮರ್ ಮತ್ತು ಶೈಲಜಾ ದಂಪತಿಯ ಪುತ್ರ ವಿಕ್ಕಿ ಎಂದು ಗುರುತಿಸಲಾಗಿದೆ. ಮಗು ತಮ್ಮ ಮನೆಯ ಮುಂದೇ ಆಟವಾಡುತ್ತಿದ್ದ ವೇಳೆ, ಕಸ ಕಲೆ ಹಾಕುವ ಪಾಲಿಕೆಯ ವಾಹನ ನಿಯಂತ್ರಣ ತಪ್ಪಿ ಬಂದು ಮಗುವಿನ ಮೇಲೆ ಹರಿದಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು ಮಗುವನ್ನು ಆಸ್ಪತ್ರೆಗೆ ಸಾಗಿಸಲತ್ನಿಸಿದರೂ, ಆತ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಳ್ಳಾರಿ ನಗರ ಪೊಲೀಸ್ ಇಲಾಖೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ. ಇತ್ತ ಬಾಲಕನ ಸಾವಿನಿಂದ ಬಾಪೂಜಿ ನಗರದಲ್ಲಿ ದುಃಖದ ಛಾಯೆ ಮಡಿದಿದ್ದು, ಸಾರ್ವಜನಿಕರು ಪಾಲಿಕೆಯ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರ ಜತೆಗೆ, ಮಹಾನಗರ ಪಾಲಿಕೆಯ ಕಸ ಸಂಗ್ರಹ ವಾಹನಗಳ ನಿರ್ವಹಣೆ, ಚಾಲಕರ ತರಬೇತಿ ಹಾಗೂ ಸುರಕ್ಷತಾ ಕ್ರಮಗಳ ಕೊರತೆ ಕುರಿತು ಪ್ರಶ್ನೆಗಳು ಉದ್ಭವವಾಗಿವೆ.
ಈ ಘಟನೆ ಸಂಬಂಧಿಸಿ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…