ಮುಂಬೈ: ಪತಿಯ ಹತ್ಯೆಗೆ ತಾನೇ ಶಡ್ಯಂತ್ರ ರೂಪಿಸಿ, ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳ ಸಹಾಯದಿಂದ ಶವವನ್ನು ನಾಶಪಡಿಸಿದ ಭೀಕರ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿದು ಬೆಳಕಿಗೆ ಬಂದಿದೆ. ಪ್ರಾಂಶುಪಾಲೆಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ, ವೈಯಕ್ತಿಕ ವೈಷಮ್ಯದಿಂದ ಪತಿಯನ್ನು ನಷ್ಠಕಾರಿ ಮಾರ್ಗದಲ್ಲಿ ಕೊಂದಿದ್ದು, ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಮೃತ ವ್ಯಕ್ತಿಯನ್ನು ನಾಗ್ಪುರ ಮೂಲದ ಶಾಂತನು ದೇಶಮುಖ್ (32) ಎಂದು ಗುರುತಿಸಲಾಗಿದೆ. ಈತನ ಪತ್ನಿ ನಿಧಿ ದೇಶಮುಖ್ (24) ಮುಂಬೈನ ಸನ್ರೈಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸುತ್ತಿದ್ದಳು. ಮೇ 15 ರಂದು ಚೌಸಲಾ ಅರಣ್ಯ ಪ್ರದೇಶದಲ್ಲಿ ಸುಟ್ಟ ಸ್ಥಿತಿಯ ಶವವೊಂದು ಪತ್ತೆಯಾಗಿದ್ದು, ಕೊನೆಯದಾಗಿ DNA ಪರೀಕ್ಷೆಯಿಂದ ಶಾಂತನು ಎಂಬುದು ದೃಢಪಟ್ಟಿತು.
ಆರೋಪ ಪ್ರಕಾರ, ಪತಿಗೆ ಊಟದಲ್ಲಿ ವಿಷ ನೀಡಿದ ನಿಧಿ, ಬಳಿಕ ಪತಿ ಮೃತಪಟ್ಟ ಬಳಿಕ ಶವವನ್ನು ಬೆಂಕಿ ಹಚ್ಚಿದಳು. ಈ ಭೀಕರ ಕಾರ್ಯದಲ್ಲಿ ಶಾಲೆಯ ಕೆಲ ಅಪ್ರಾಪ್ತ ವಿದ್ಯಾರ್ಥಿಗಳ ಸಹಕಾರ ಪಡೆದಿದ್ದಾಳೆ ಎನ್ನಲಾಗಿದೆ. ಶಿಕ್ಷಕರಂಥವರಿಂದ ಇದೇನೂ ನಿರೀಕ್ಷಿಸದ ಮಕ್ಕಳು ಈ ಕ್ರೂರ ಕೃತ್ಯದ ಭಾಗಿಯಾಗಿದ್ದ ವಿಷಯ ಸ್ಥಳೀಯರಲ್ಲಿ ತೀವ್ರ ಆಘಾತ ಉಂಟುಮಾಡಿದೆ.
ಪೊಲೀಸರು ಸ್ಥಳೀಯರ ಸಹಾಯದಿಂದ ಗಂಭೀರ ತನಿಖೆ ನಡೆಸಿದ್ದು, ಶಂಕೆಯುತವಾಗಿ ಕಂಡುಬಂದ ಪತ್ನಿಯ ವಿರುದ್ಧ ಸಾಕ್ಷ್ಯಗಳನ್ನು ಕಲೆಹಾಕಿದರು. ವಿಚಾರಣೆ ವೇಳೆ ನಿಧಿ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಪ್ರಕರಣದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಭೀಕರ ಘಟನೆಯು ಶಿಕ್ಷಣ ಕ್ಷೇತ್ರದ ನೈತಿಕತೆಗೆ ಗಬ್ಬೆ ತರುತ್ತಿರುವುದರೊಂದಿಗೆ, ಬಾಲಮನಸ್ಸಿನಲ್ಲಿ ನಾಪತ್ತೆಯಾದ ಮಾನವೀಯತೆ ಕುರಿತು ಚಿಂತೆ ಉಂಟುಮಾಡಿದೆ.
ಪೊಲೀಸರು ಹೆಚ್ಚಿನ ಮಾಹಿತಿ ಹಾಗೂ ಹಿನ್ನೆಲೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರೆಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…